25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

ಬೆಳ್ತಂಗಡಿ: ಭರವಸೆಯ ನಾಯಕತ್ವ, ಸುಸ್ಥಿರ ಅಭಿವೃದ್ಧಿ, ರಾಷ್ಟ್ರೀಯವಾದದ ಸಿದ್ಧಾಂತಗಳನ್ನು ಆಧಾರವಾಗಿಟ್ಟುಕೊಂಡು ಕಾರ್ಯ ಮಾಡುತ್ತಿರುವ ರಾಜ್ಯ ಬಿಜೆಪಿ ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ”ಯ ಅಂಗವಾಗಿ ನಡೆಯಲಿರುವ “ವಿಜಯ ಸಂಕಲ್ಪ ರಥಯಾತ್ರೆ” ಮಾ. 12 ಆದಿತ್ಯವಾರ ಪೂರ್ವಾಹ್ನ 10 ಗಂಟೆಗೆ ಸರಿಯಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಲಿದೆ.


ಬೆಳ್ತಂಗಡಿ ಶ್ರೀ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾದ ಮೂಲಕ “ವಿಜಯ ಸಂಕಲ್ಪ ಯಾತ್ರೆ”ಯ ಯಾತ್ರೆ ಸಾಗಲಿದೆ. ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್‌ ಪೂಂಜ ಅವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಎಲ್ಲಾ ಪೂರ್ವ ತಯಾರಿಯನ್ನು ನಡೆಸಲಾಗಿದ್ದು, ನಗರವನ್ನು ಬಿಜೆಪಿ ಪತಾಕೆ ಹಾಗೂ ತೋರಣಗಳಿಂದ ಶೃಂಗರಿಸಲಾಗಿದೆ. ಯಾತ್ರೆಯಲ್ಲಿ ಮಾಜಿ ಸಚಿವರಾದಈಶ್ವರಪ್ಪ, ಕಂದಾಯ ಸಚಿವರಾದ ಅಶೋಕ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಸಂಸದ ನಳಿನ್‌ಕುಮಾರ್‌ ಕಟೀಲ್‌, ರಾಜ್ಯ, ಜಿಲ್ಲೆ ಹಾಗೂ ತಾಲೂಕಿನ ಪಕ್ಷದ ನಾಯಕರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Related posts

ದ.ಕ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಬೆಳ್ತಂಗಡಿಯ ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್

Suddi Udaya

ತೆಂಕಕಾರಂದೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya

ಉಜಿರೆ ಹಳೆಪೇಟೆ ನವೀಕೃತ ಶಾಲೆ ಹಸ್ತಾಂತರ

Suddi Udaya

ಬೆಳ್ತಂಗಡಿ : ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya
error: Content is protected !!