September 6, 2026
ತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

ಬೆಳ್ತಂಗಡಿ: ಭರವಸೆಯ ನಾಯಕತ್ವ, ಸುಸ್ಥಿರ ಅಭಿವೃದ್ಧಿ, ರಾಷ್ಟ್ರೀಯವಾದದ ಸಿದ್ಧಾಂತಗಳನ್ನು ಆಧಾರವಾಗಿಟ್ಟುಕೊಂಡು ಕಾರ್ಯ ಮಾಡುತ್ತಿರುವ ರಾಜ್ಯ ಬಿಜೆಪಿ ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ”ಯ ಅಂಗವಾಗಿ ನಡೆಯಲಿರುವ “ವಿಜಯ ಸಂಕಲ್ಪ ರಥಯಾತ್ರೆ” ಮಾ. 12 ಆದಿತ್ಯವಾರ ಪೂರ್ವಾಹ್ನ 10 ಗಂಟೆಗೆ ಸರಿಯಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಲಿದೆ.


ಬೆಳ್ತಂಗಡಿ ಶ್ರೀ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾದ ಮೂಲಕ “ವಿಜಯ ಸಂಕಲ್ಪ ಯಾತ್ರೆ”ಯ ಯಾತ್ರೆ ಸಾಗಲಿದೆ. ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್‌ ಪೂಂಜ ಅವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಎಲ್ಲಾ ಪೂರ್ವ ತಯಾರಿಯನ್ನು ನಡೆಸಲಾಗಿದ್ದು, ನಗರವನ್ನು ಬಿಜೆಪಿ ಪತಾಕೆ ಹಾಗೂ ತೋರಣಗಳಿಂದ ಶೃಂಗರಿಸಲಾಗಿದೆ. ಯಾತ್ರೆಯಲ್ಲಿ ಮಾಜಿ ಸಚಿವರಾದಈಶ್ವರಪ್ಪ, ಕಂದಾಯ ಸಚಿವರಾದ ಅಶೋಕ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಸಂಸದ ನಳಿನ್‌ಕುಮಾರ್‌ ಕಟೀಲ್‌, ರಾಜ್ಯ, ಜಿಲ್ಲೆ ಹಾಗೂ ತಾಲೂಕಿನ ಪಕ್ಷದ ನಾಯಕರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Related posts

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕನ್ಯಾಡಿ: ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುತ್ತಮ ಅಂಕ ಪಡೆದ ಯಕ್ಷಿತಾರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಿಲ್ಲೂರಿನ ಶಾಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳ ಆಯೋಜನೆ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರಾದ ರಂಜನ್ ಜಿ. ಗೌಡ ಮತ್ತು ಅಭಿನಂದನ್ ಹರೀಶ್ ಕುಮಾರ್

Suddi Udaya

ತೋಟತ್ತಾಡಿ: ಶಿವದಾಸ ಎಂ.ಎ. ನಿಧನ

Suddi Udaya
error: Content is protected !!