March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಬೆಳ್ತಂಗಡಿ

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

ತೋಟತ್ತಾಡಿ : ತೋಟತ್ತಾಡಿ ಗ್ರಾಮದ ಮುಂಡಾಯಿಲು ಎಂಬಲ್ಲಿ ಸರಕಾರಿ ಗುಡ್ಡದಲ್ಲಿ ಜುಗಾರಿ ಆಟವಾಡುತ್ತಿದ್ದ
ಅಡ್ಡೆಗೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿ, ,ರೂ.11,870 ಮೌಲ್ಯದ ಸೋತ್ತುಗಳನ್ನು ವಶಪಡಿಸಿಕೊಂಡ ಘಟನೆ ಮಾ.12 ರಂದು ವರದಿಯಾಗಿದೆ.

ಚಾರ್ಮಾಡಿ ಗ್ರಾಮದ  ಅರೆಕಲ್ ಮನೆ ನಿವಾಸಿ ರಹೀಂ ( 44ವರ್ಷ), 

ಮುಂಡಾಜೆ ಗ್ರಾಮದ, ದೇವಗುಡಿ ಮನೆಯ ಫಯಾಜ್‌ ಪಾಷಾ ( 33 ವರ್ಷ), ‌‌ಕಡಿರುದ್ಯಾವರ ಗ್ರಾಮದ,
ಕಾನಪ೯ ನಿವಾಸಿ ರಾಜೇಶ್‌, (46 ವರ್ಷ) ,ತೋಟತ್ತಾಡಿ ಗ್ರಾಮದ‌ ಮುಂಡಾಯಿಲ್‌ ಮನೆಯ
ಅನೀಲ್ ( 45 ವರ್ಷ) ಬಂಧಿತರಾದವರು. ಸಿದ್ದಿಕ್‌ ಯಾನೆ ಅರೆಕಲ್‌ ಸಿದ್ದಿಕ್‌, ಕೃಷ್ಣ ಯಾನೆ ಕಿಟ್ಟ ಗಾಂಧಿನಗರ, ಸಂತೋಷ್‌ ಗಾಂಧಿನಗರ, ಸುಧಾಕರ ಕೊಯಿಕುರಿ ಪೊಲೀಸರ ದಾಳಿ ವೇಳೆ ತಪ್ಪಿಸಿಕೊಂಡಿದ್ದಾರೆ.
ಘಟನೆ ವಿವರ: ತೋಟತ್ತಾಡಿ ಗ್ರಾಮದ ಮುಂಡಾಯಿಲು ಎಂಬಲ್ಲಿ ಸರಕಾರಿ ಗುಡ್ಡದಲ್ಲಿ ಕೆಲವರು ಹಣವನ್ನು ಪಣವಾಗಿಟ್ಟು ಇಸ್ಪೀಟ್‌ ಜುಗಾರಿ ಆಟ ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯನ್ವಯ ಮಾ.22ರಂದು ಬೆಳಗ್ಗಿನ ಜಾವ 3.30 ಗಂಟೆಗೆ ಜುಗಾರಿ ಅಡ್ಡೆಗೆ ಧಾಳಿ ನಡೆಸಿದಾಗ ಆಟ ಆಡುತ್ತಿದ್ದವರು ಅಲ್ಲಿಂದ ಓಡಿ ಹೋಗಲು ಪ್ರಯತ್ನಿಸಿದ್ದು ಓಡಿ ಹೋಗುತ್ತಿದ್ದವರನ್ನು ಪೊಲೀಸರು ಬೆನ್ನಟ್ಟಿ ನಾಲ್ಕು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳದಲ್ಲಿದ್ದ ಪ್ಲಾಸ್ಟಿಕ್‌ ಚಾಪೆ,
ಮೇಣದ ಬತ್ತಿ , ಲೈಟರ್‌ ,
ವಿವಿಧ ಜಾತಿಯ ಇಸ್ಪೀಟ್‌ ಎಲೆಗಳು,
ಒಟ್ಟು ರೂ 7,070 ನಗದು, ಒಂದು ಟಚ್‌ ಸ್ಕ್ರೀನ್‌ ಮೊಬೈಲ್‌, ನಾಲ್ಕು
ಚಿಕ್ಕ ಮೊಬೈಲ್‌ ಪೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೋತ್ತುಗಳ ಒಟ್ಟು ಮೌಲ್ಯ ರೂ.
11,870 ಎಂದು ಅಂದಾಜಿಸಲಾಗಿದೆ.
ಧಮ೯ಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡದ ಉದ್ಘಾಟನೆ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ವಿಶೇಷ ತರಬೇತಿ ದಿನಾಚರಣೆ

Suddi Udaya

ನಾಳೆ (ಮೇ 2) : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

Suddi Udaya

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya

ಮಚ್ಚಿನ ಗ್ರಾಮದ ಪೇಟೆಯ ಶೌಚಾಲಯದ ಆದೋಗತಿ.. ಉಪಯೋಗಕ್ಕಿಲ್ಲದ ಕಟ್ಟಡ-ತುಕ್ಕು ಹಿಡಿದ ಬಾಗಿಲು…

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ

Suddi Udaya
error: Content is protected !!