July 24, 2026
ಅಪರಾಧ ಸುದ್ದಿ

ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ನಿಡ್ಲೆ
ಪಿಲಿಕಜೆ ನಿವಾಸಿ ದಿನೇಶ ನೇಣು ಬಿಗಿದು ಆತ್ಮಹತ್ಯೆ

ನಿಡ್ಲೆ : ಇಲ್ಲಿಯ ಪಿಲಿಕಜೆ ನಿವಾಸಿ ದಿನೇಶ ( 36 ವ) ಎಂಬವರು ಸುಮಾರು ಒಂದು ವರ್ಷದಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 11 ರಂದು ನಡೆದಿದೆ.
ಮಾ.10 ರಂದು ಮಧ್ಯಾಹ್ನ ಊಟ ಮಾಡಿ ಸಂಜೆ ಸುಮಾರು 3 ಗಂಟೆಯವರೆಗೆ ಮನೆಯಲ್ಲಿ ಇದ್ದವರು ಬಳಿಕ ನಾಪತ್ತೆ ಯಾಗಿದ್ದರು. ರಾತ್ರಿಯಾದರೂ ಮನೆಗೆ ವಾಪಾಸು ಬರಲಿಲ್ಲ .ಎಲ್ಲ ಕಡೆ ಹುಡುಕಿದರೂ ಪತ್ತೆಯಾಗಲಿಲ್ಲ. ಮೂರು ದಿನ ಮಾ.11 ರಂದು ಬೆಳಿಗ್ಗೆ ಮನೆಯವರು ಸೇರಿ ಹುಡುಕಿದಾಗ ಗುಡ್ಡ ಜಾಗದಲ್ಲಿ ಒಂದು ಮರದ ಕೊಂಬೆಗೆ ಸೈಲಾನ್ ಹಗ್ಗದಿಂದ ಕಟ್ಟಿ ಕುತ್ತಿಗೆಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದ್ದು, ದಿನೇಶರವರು ಮಾನಸಿಕ ಖಾಯಿಲೆಯಿಂದ ಬಳಲುತ್ತಿ ದ್ದವರು ಇದೇ ವಿಚಾರದಲ್ಲಿ ಮನನೊಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿ
ರಬಹುದೆಂದು ಸಂಶಯಿಸಲಾಗಿದೆ. ಈ ಬಗ್ಗೆ ಮೃತರ ತಾಯಿ ಲಕ್ಷ್ಮಿ ಅವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣಾ ಯುಡಿಆರ್ ಕ್ರಮಾಂಕ ಮತ್ತು ಕಾನೂನಿನ ಕಲಂ 21/2023 ಕಲಂ: 174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ ಧರ್ಮಸ್ಥಳ ಶೌಚಾಲಯದ ಸುತ್ತಮುತ್ತ ಸ್ಥಳ ಮಹಜರು

Suddi Udaya

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು

Suddi Udaya

ಚಿನ್ನದ ಕರಿಮಣಿ ಸರ ಕಳ್ಳತನ ಪ್ರಕರಣ ಆರೋಪಿ ಉಮೇಶ್ ಗೌಡ ಅಪರಾಧಿಯೆಂದು ತೀರ್ಪು ನೀಡಿದ ನ್ಯಾಯಾಲಯ

Suddi Udaya

ಬಂದಾರು ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಂದ ದಾಳಿ: ಸುಮಾರು 48 ಟನ್ ನಷ್ಟು ಅಕ್ರಮ ಮರಳು ವಶ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya
error: Content is protected !!