July 23, 2026
ಸಾಧಕರು

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರು
ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿ ಗೆ ಆಯ್ಕೆ

ಬೆಳ್ತಂಗಡಿ: ಭಾರತೀಯ ಭೂ ಸೇನೆಯಲ್ಲಿ 18 ವಷ೯ ಯೋಧರಾಗಿ ದೇಶ ರಕ್ಷಣೆ ಯ ಕಾಯ೯ಮಾಡಿ ನಿವೃತ್ತರಾಗಿರುವ ಗೋಪಾಲಕೃಷ್ಣ ಕಾಂಚೋಡು ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊಡಮಾಡುವ ಪ್ರತಿಷ್ಠಿತ
ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಪ್ರಶಸ್ತಿ ಗೆ ಆಯ್ಕೆ ಯಾಗಿದ್ದಾರೆ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಏಕ್‌ ಭಾರತ್’ ಕಾಯ೯ಕ್ರಮದಲ್ಲಿ ಪ್ರತಿ ವರ್ಷದಂತೆ ಈ ವರ್ಷ ನೀಡಲಾಗುವ ಪ್ರತಿಷ್ಠಿತ ಪ್ರಶಸ್ತಿಗೆ ಕಾಂಚೋಡು ಅವರು ಪಾತ್ರರಾಗಿದ್ದಾರೆ.ಅವರು ಭಾರತೀಯ ಭೂ ಸೇನೆಯಲ್ಲಿ ಜಮ್ಮು ಕಾಶ್ಮೀರ ಸೇರಿದಂತೆ ದೇಶದ ವಿವಿಧೆಡೆ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು.‌

ಸೇನಾ ನಿವೃತ್ತಿಯ ನಂತರ ತನ್ನೂರಿಗೆ ಬಂದು ಬೆಳ್ತಂಗಡಿ ತಾಲೂಕು ಉಜಿರೆ ಯಲ್ಲಿ ನೆಲೆಸಿ, “ರವಿ ಟ್ರೇಡರ್ಸ್” ಎಂಬ ಉದ್ದಿಮೆ ಸ್ಥಾಪಿಸಿ ಹತ್ತಾರು ಯುವಕರಿಗೆ ಜೀವನೋಪಾಯದ ಹಾದಿಯನ್ನು ಸೃಷ್ಟಿಸುತ್ತಾ ಸೇನೆಗೆ ಸೇರಲು ಬಯಸುವ ಯುವಕರಿಗೆ ಉಚಿತ ಮಾಹಿತಿ ನೀಡುತ್ತಾ ಬರುತ್ತಿದ್ದಾರೆ.
ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾ, ಕೃಷಿ ಕ್ಷೇತ್ರ ದಲ್ಲಿ ವೈಜ್ಞಾನಿಕವಾಗಿ, ಉತ್ತಮ ಆದಾಯ ಪಡೆಯುವ ಆಧುನಿಕ ತಂತ್ರಜ್ಞಾನ ಗಳೊಂದಿಗೆ ಪ್ರಕೃತಿಗೆ ತೊಂದರೆ ಯಾಗದಂತೆ (ಜಲ, ನೆಲ ಉಳಿಸಿ ) ಸಾವಯವ ಕೃಷಿಯನ್ನು ಮಾಡುತ್ತಾ, ಕಂಗು, ತೆಂಗು, ಬಾಳೆ ಕೃಷಿಗಳೊಂದಿಗೆ ಎಲ್ಹೋಟಿಕ್ (exotic) ಹಣ್ಣುಗಳನ್ನು ಬೆಳೆಯುತ್ತಾ, ಪ್ರಾಕೃತಿಕವಾಗಿ ಪ್ರಕೃತಿ ಸಹಜಕ್ರಿಯೆ, ಪರಾಗ ಸ್ಪರ್ಶಕ್ಕೆ ಪೂರಕ ಜೇನುಸಾಕಣೆ ಮಾಡುತ್ತಾ ಹತ್ತು ಹಲವು ಆಸಕ್ತ ಕೃಷಿಕರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಸರ್ಕಾರ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.
ಮಾ.15ರಂದು ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೋಪಾಲಕೃಷ್ಣ ಕಾಂಚೋಡು ಅವರಿಗೆ “ಕೃಷಿಕ ರತ್ನ” ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ಸಚಿವರುಗಳಾದ ಮುರುಗೇಶ್ ನಿರಾಣಿ, ಡಾ. ಸುಧಾಕರ್, ಕೆ.ಸಿ ನಾರಾಯಣ ಗೌಡ ಮೊದಲಾದವರು ಉಪಸ್ಥಿತರಿರುವರು.

Related posts

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ಭುಜಬಲಿ ಧರ್ಮಸ್ಥಳ ರವರಿಗೆ “ಶ್ರೀ ಯಕ್ಷಾಂಜನೆಯ ಪ್ರಶಸ್ತಿ” ಪ್ರದಾನ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya
error: Content is protected !!