September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಬೆಳ್ತಂಗಡಿ

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

ತೋಟತ್ತಾಡಿ : ತೋಟತ್ತಾಡಿ ಗ್ರಾಮದ ಮುಂಡಾಯಿಲು ಎಂಬಲ್ಲಿ ಸರಕಾರಿ ಗುಡ್ಡದಲ್ಲಿ ಜುಗಾರಿ ಆಟವಾಡುತ್ತಿದ್ದ
ಅಡ್ಡೆಗೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿ, ,ರೂ.11,870 ಮೌಲ್ಯದ ಸೋತ್ತುಗಳನ್ನು ವಶಪಡಿಸಿಕೊಂಡ ಘಟನೆ ಮಾ.12 ರಂದು ವರದಿಯಾಗಿದೆ.

ಚಾರ್ಮಾಡಿ ಗ್ರಾಮದ  ಅರೆಕಲ್ ಮನೆ ನಿವಾಸಿ ರಹೀಂ ( 44ವರ್ಷ), 

ಮುಂಡಾಜೆ ಗ್ರಾಮದ, ದೇವಗುಡಿ ಮನೆಯ ಫಯಾಜ್‌ ಪಾಷಾ ( 33 ವರ್ಷ), ‌‌ಕಡಿರುದ್ಯಾವರ ಗ್ರಾಮದ,
ಕಾನಪ೯ ನಿವಾಸಿ ರಾಜೇಶ್‌, (46 ವರ್ಷ) ,ತೋಟತ್ತಾಡಿ ಗ್ರಾಮದ‌ ಮುಂಡಾಯಿಲ್‌ ಮನೆಯ
ಅನೀಲ್ ( 45 ವರ್ಷ) ಬಂಧಿತರಾದವರು. ಸಿದ್ದಿಕ್‌ ಯಾನೆ ಅರೆಕಲ್‌ ಸಿದ್ದಿಕ್‌, ಕೃಷ್ಣ ಯಾನೆ ಕಿಟ್ಟ ಗಾಂಧಿನಗರ, ಸಂತೋಷ್‌ ಗಾಂಧಿನಗರ, ಸುಧಾಕರ ಕೊಯಿಕುರಿ ಪೊಲೀಸರ ದಾಳಿ ವೇಳೆ ತಪ್ಪಿಸಿಕೊಂಡಿದ್ದಾರೆ.
ಘಟನೆ ವಿವರ: ತೋಟತ್ತಾಡಿ ಗ್ರಾಮದ ಮುಂಡಾಯಿಲು ಎಂಬಲ್ಲಿ ಸರಕಾರಿ ಗುಡ್ಡದಲ್ಲಿ ಕೆಲವರು ಹಣವನ್ನು ಪಣವಾಗಿಟ್ಟು ಇಸ್ಪೀಟ್‌ ಜುಗಾರಿ ಆಟ ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯನ್ವಯ ಮಾ.22ರಂದು ಬೆಳಗ್ಗಿನ ಜಾವ 3.30 ಗಂಟೆಗೆ ಜುಗಾರಿ ಅಡ್ಡೆಗೆ ಧಾಳಿ ನಡೆಸಿದಾಗ ಆಟ ಆಡುತ್ತಿದ್ದವರು ಅಲ್ಲಿಂದ ಓಡಿ ಹೋಗಲು ಪ್ರಯತ್ನಿಸಿದ್ದು ಓಡಿ ಹೋಗುತ್ತಿದ್ದವರನ್ನು ಪೊಲೀಸರು ಬೆನ್ನಟ್ಟಿ ನಾಲ್ಕು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳದಲ್ಲಿದ್ದ ಪ್ಲಾಸ್ಟಿಕ್‌ ಚಾಪೆ,
ಮೇಣದ ಬತ್ತಿ , ಲೈಟರ್‌ ,
ವಿವಿಧ ಜಾತಿಯ ಇಸ್ಪೀಟ್‌ ಎಲೆಗಳು,
ಒಟ್ಟು ರೂ 7,070 ನಗದು, ಒಂದು ಟಚ್‌ ಸ್ಕ್ರೀನ್‌ ಮೊಬೈಲ್‌, ನಾಲ್ಕು
ಚಿಕ್ಕ ಮೊಬೈಲ್‌ ಪೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೋತ್ತುಗಳ ಒಟ್ಟು ಮೌಲ್ಯ ರೂ.
11,870 ಎಂದು ಅಂದಾಜಿಸಲಾಗಿದೆ.
ಧಮ೯ಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕರ್ನಾಟಕ ರಾಜ್ಯ ಅಮೆಚೂರು ಸಂಸ್ಥೆ ರಾಜ್ಯ ತೀರ್ಪುಗಾರರ ಮಂಡಳಿಯ ಸಂಚಾಲಕರಾಗಿ ಪ್ರಭಾಕರ್ ನಾರಾವಿ ಆಯ್ಕೆ

Suddi Udaya

ಪಟ್ರಮೆ: ಪಟ್ಟೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಅಧ್ಯಕ್ಷರಾಗಿ ಯೋಗೀಶ್ ಗೌಡ, ಕಾರ್ಯದರ್ಶಿಯಾಗಿ ಜಯಾನಂದ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya

ಶಿರ್ಲಾಲು‌ ಗ್ರಾ.ಪಂ. ವಿಕಲಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಮೇ 12-16 ಉಜಿರೆ ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನದ ಮಹಾಸಮ್ಮೇಳನ

Suddi Udaya
error: Content is protected !!