ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

ತೋಟತ್ತಾಡಿ : ತೋಟತ್ತಾಡಿ ಗ್ರಾಮದ ಮುಂಡಾಯಿಲು ಎಂಬಲ್ಲಿ ಸರಕಾರಿ ಗುಡ್ಡದಲ್ಲಿ ಜುಗಾರಿ ಆಟವಾಡುತ್ತಿದ್ದ
ಅಡ್ಡೆಗೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿ, ,ರೂ.11,870 ಮೌಲ್ಯದ ಸೋತ್ತುಗಳನ್ನು ವಶಪಡಿಸಿಕೊಂಡ ಘಟನೆ ಮಾ.12 ರಂದು ವರದಿಯಾಗಿದೆ.

ಚಾರ್ಮಾಡಿ ಗ್ರಾಮದ  ಅರೆಕಲ್ ಮನೆ ನಿವಾಸಿ ರಹೀಂ ( 44ವರ್ಷ), 

ಮುಂಡಾಜೆ ಗ್ರಾಮದ, ದೇವಗುಡಿ ಮನೆಯ ಫಯಾಜ್‌ ಪಾಷಾ ( 33 ವರ್ಷ), ‌‌ಕಡಿರುದ್ಯಾವರ ಗ್ರಾಮದ,
ಕಾನಪ೯ ನಿವಾಸಿ ರಾಜೇಶ್‌, (46 ವರ್ಷ) ,ತೋಟತ್ತಾಡಿ ಗ್ರಾಮದ‌ ಮುಂಡಾಯಿಲ್‌ ಮನೆಯ
ಅನೀಲ್ ( 45 ವರ್ಷ) ಬಂಧಿತರಾದವರು. ಸಿದ್ದಿಕ್‌ ಯಾನೆ ಅರೆಕಲ್‌ ಸಿದ್ದಿಕ್‌, ಕೃಷ್ಣ ಯಾನೆ ಕಿಟ್ಟ ಗಾಂಧಿನಗರ, ಸಂತೋಷ್‌ ಗಾಂಧಿನಗರ, ಸುಧಾಕರ ಕೊಯಿಕುರಿ ಪೊಲೀಸರ ದಾಳಿ ವೇಳೆ ತಪ್ಪಿಸಿಕೊಂಡಿದ್ದಾರೆ.
ಘಟನೆ ವಿವರ: ತೋಟತ್ತಾಡಿ ಗ್ರಾಮದ ಮುಂಡಾಯಿಲು ಎಂಬಲ್ಲಿ ಸರಕಾರಿ ಗುಡ್ಡದಲ್ಲಿ ಕೆಲವರು ಹಣವನ್ನು ಪಣವಾಗಿಟ್ಟು ಇಸ್ಪೀಟ್‌ ಜುಗಾರಿ ಆಟ ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯನ್ವಯ ಮಾ.22ರಂದು ಬೆಳಗ್ಗಿನ ಜಾವ 3.30 ಗಂಟೆಗೆ ಜುಗಾರಿ ಅಡ್ಡೆಗೆ ಧಾಳಿ ನಡೆಸಿದಾಗ ಆಟ ಆಡುತ್ತಿದ್ದವರು ಅಲ್ಲಿಂದ ಓಡಿ ಹೋಗಲು ಪ್ರಯತ್ನಿಸಿದ್ದು ಓಡಿ ಹೋಗುತ್ತಿದ್ದವರನ್ನು ಪೊಲೀಸರು ಬೆನ್ನಟ್ಟಿ ನಾಲ್ಕು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳದಲ್ಲಿದ್ದ ಪ್ಲಾಸ್ಟಿಕ್‌ ಚಾಪೆ,
ಮೇಣದ ಬತ್ತಿ , ಲೈಟರ್‌ ,
ವಿವಿಧ ಜಾತಿಯ ಇಸ್ಪೀಟ್‌ ಎಲೆಗಳು,
ಒಟ್ಟು ರೂ 7,070 ನಗದು, ಒಂದು ಟಚ್‌ ಸ್ಕ್ರೀನ್‌ ಮೊಬೈಲ್‌, ನಾಲ್ಕು
ಚಿಕ್ಕ ಮೊಬೈಲ್‌ ಪೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೋತ್ತುಗಳ ಒಟ್ಟು ಮೌಲ್ಯ ರೂ.
11,870 ಎಂದು ಅಂದಾಜಿಸಲಾಗಿದೆ.
ಧಮ೯ಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ರಾಷ್ಟ್ರೀಯ ಮಟ್ಟದ ತರಬೇತಿದಾರರ ತಂಡದಿಂದ ಧರ್ಮಸ್ಥಳದಲ್ಲಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಸಂವಾದ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಖೋ-ಖೋ ಪಂದ್ಯಾಟ

Suddi Udaya

ಸುಲ್ಕೇರಿ ಗ್ರಾಮದ ನಾಲ್ಕು ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

Suddi Udaya

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಮಂಗಳೂರು ವಿಭಾಗೀಯ ರೈಲ್ವೇ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಶೀಘ್ರದಲ್ಲಿ ವಂದೇ ಭಾರತ್ ರೈಲು ಮಂಗಳೂರಿಗೆ : ರಾಜೇಶ್ ಪುದುಶೇರಿ

Suddi Udaya
error: Content is protected !!