July 23, 2026
ಅಪರಾಧ ಸುದ್ದಿ

ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ನಿಡ್ಲೆ
ಪಿಲಿಕಜೆ ನಿವಾಸಿ ದಿನೇಶ ನೇಣು ಬಿಗಿದು ಆತ್ಮಹತ್ಯೆ

ನಿಡ್ಲೆ : ಇಲ್ಲಿಯ ಪಿಲಿಕಜೆ ನಿವಾಸಿ ದಿನೇಶ ( 36 ವ) ಎಂಬವರು ಸುಮಾರು ಒಂದು ವರ್ಷದಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 11 ರಂದು ನಡೆದಿದೆ.
ಮಾ.10 ರಂದು ಮಧ್ಯಾಹ್ನ ಊಟ ಮಾಡಿ ಸಂಜೆ ಸುಮಾರು 3 ಗಂಟೆಯವರೆಗೆ ಮನೆಯಲ್ಲಿ ಇದ್ದವರು ಬಳಿಕ ನಾಪತ್ತೆ ಯಾಗಿದ್ದರು. ರಾತ್ರಿಯಾದರೂ ಮನೆಗೆ ವಾಪಾಸು ಬರಲಿಲ್ಲ .ಎಲ್ಲ ಕಡೆ ಹುಡುಕಿದರೂ ಪತ್ತೆಯಾಗಲಿಲ್ಲ. ಮೂರು ದಿನ ಮಾ.11 ರಂದು ಬೆಳಿಗ್ಗೆ ಮನೆಯವರು ಸೇರಿ ಹುಡುಕಿದಾಗ ಗುಡ್ಡ ಜಾಗದಲ್ಲಿ ಒಂದು ಮರದ ಕೊಂಬೆಗೆ ಸೈಲಾನ್ ಹಗ್ಗದಿಂದ ಕಟ್ಟಿ ಕುತ್ತಿಗೆಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದ್ದು, ದಿನೇಶರವರು ಮಾನಸಿಕ ಖಾಯಿಲೆಯಿಂದ ಬಳಲುತ್ತಿ ದ್ದವರು ಇದೇ ವಿಚಾರದಲ್ಲಿ ಮನನೊಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿ
ರಬಹುದೆಂದು ಸಂಶಯಿಸಲಾಗಿದೆ. ಈ ಬಗ್ಗೆ ಮೃತರ ತಾಯಿ ಲಕ್ಷ್ಮಿ ಅವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣಾ ಯುಡಿಆರ್ ಕ್ರಮಾಂಕ ಮತ್ತು ಕಾನೂನಿನ ಕಲಂ 21/2023 ಕಲಂ: 174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಅಕ್ರಮ ಜೂಜಾಟದ ಮೇಲೆ ವೇಣೂರು ಪೊಲೀಸರ ದಾಳಿ: 17 ಮಂದಿ ಆರೋಪಿಗಳ ಬಂಧನ

Suddi Udaya

ತೋಟದಲ್ಲಿ ಅಡಿಕೆ ಸಂಗ್ರಹಣೆ ಮಾಡುತ್ತಿರುವಾಗ ಹಲ್ಲೆ ಮಾಡಿ ಅಡಿಕೆ- ಕಾಂಕ್ರೀಟ್ ಬೇಲಿ ದರೋಡೆ ಆರೋಪ: ಇಪ್ಪತ್ತು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪುದುವೆಟ್ಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

Suddi Udaya
error: Content is protected !!