September 6, 2026
ಅಪರಾಧ ಸುದ್ದಿ

ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ನಿಡ್ಲೆ
ಪಿಲಿಕಜೆ ನಿವಾಸಿ ದಿನೇಶ ನೇಣು ಬಿಗಿದು ಆತ್ಮಹತ್ಯೆ

ನಿಡ್ಲೆ : ಇಲ್ಲಿಯ ಪಿಲಿಕಜೆ ನಿವಾಸಿ ದಿನೇಶ ( 36 ವ) ಎಂಬವರು ಸುಮಾರು ಒಂದು ವರ್ಷದಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 11 ರಂದು ನಡೆದಿದೆ.
ಮಾ.10 ರಂದು ಮಧ್ಯಾಹ್ನ ಊಟ ಮಾಡಿ ಸಂಜೆ ಸುಮಾರು 3 ಗಂಟೆಯವರೆಗೆ ಮನೆಯಲ್ಲಿ ಇದ್ದವರು ಬಳಿಕ ನಾಪತ್ತೆ ಯಾಗಿದ್ದರು. ರಾತ್ರಿಯಾದರೂ ಮನೆಗೆ ವಾಪಾಸು ಬರಲಿಲ್ಲ .ಎಲ್ಲ ಕಡೆ ಹುಡುಕಿದರೂ ಪತ್ತೆಯಾಗಲಿಲ್ಲ. ಮೂರು ದಿನ ಮಾ.11 ರಂದು ಬೆಳಿಗ್ಗೆ ಮನೆಯವರು ಸೇರಿ ಹುಡುಕಿದಾಗ ಗುಡ್ಡ ಜಾಗದಲ್ಲಿ ಒಂದು ಮರದ ಕೊಂಬೆಗೆ ಸೈಲಾನ್ ಹಗ್ಗದಿಂದ ಕಟ್ಟಿ ಕುತ್ತಿಗೆಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದ್ದು, ದಿನೇಶರವರು ಮಾನಸಿಕ ಖಾಯಿಲೆಯಿಂದ ಬಳಲುತ್ತಿ ದ್ದವರು ಇದೇ ವಿಚಾರದಲ್ಲಿ ಮನನೊಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿ
ರಬಹುದೆಂದು ಸಂಶಯಿಸಲಾಗಿದೆ. ಈ ಬಗ್ಗೆ ಮೃತರ ತಾಯಿ ಲಕ್ಷ್ಮಿ ಅವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣಾ ಯುಡಿಆರ್ ಕ್ರಮಾಂಕ ಮತ್ತು ಕಾನೂನಿನ ಕಲಂ 21/2023 ಕಲಂ: 174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಸೌತಡ್ಕ: ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ರಾಷ್ಟ್ರೀಕೃತ ಬ್ಯಾಂಕ್‌ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್

Suddi Udaya

ಚಾಮಾ೯ಡಿ : ಅಕ್ರಮ ಜಾನುವಾರು ಸಾಗಾಟ ಪ್ರಕರಣ ಪತ್ತೆ- ಜಾನುವಾರು ಸಹಿತ ಓವ೯ಬಂಧನ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ: ಕೊಲೆ ಆರೋಪಿಯ ಗುರುತು ಪತ್ತೆ ಹಚ್ಚಿದ ಪೊಲೀಸರು

Suddi Udaya

ವೈಯಕ್ತಿಕ ದ್ವೇಷ ಹಿನ್ನೆಲೆ ವ್ಯಕ್ತಿಯ ಮೇಲೆ ಹಲ್ಲೆ – ಪ್ರಕರಣ ದಾಖಲು

Suddi Udaya
error: Content is protected !!