30.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಾಧಕರು

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರು
ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿ ಗೆ ಆಯ್ಕೆ

ಬೆಳ್ತಂಗಡಿ: ಭಾರತೀಯ ಭೂ ಸೇನೆಯಲ್ಲಿ 18 ವಷ೯ ಯೋಧರಾಗಿ ದೇಶ ರಕ್ಷಣೆ ಯ ಕಾಯ೯ಮಾಡಿ ನಿವೃತ್ತರಾಗಿರುವ ಗೋಪಾಲಕೃಷ್ಣ ಕಾಂಚೋಡು ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊಡಮಾಡುವ ಪ್ರತಿಷ್ಠಿತ
ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಪ್ರಶಸ್ತಿ ಗೆ ಆಯ್ಕೆ ಯಾಗಿದ್ದಾರೆ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಏಕ್‌ ಭಾರತ್’ ಕಾಯ೯ಕ್ರಮದಲ್ಲಿ ಪ್ರತಿ ವರ್ಷದಂತೆ ಈ ವರ್ಷ ನೀಡಲಾಗುವ ಪ್ರತಿಷ್ಠಿತ ಪ್ರಶಸ್ತಿಗೆ ಕಾಂಚೋಡು ಅವರು ಪಾತ್ರರಾಗಿದ್ದಾರೆ.ಅವರು ಭಾರತೀಯ ಭೂ ಸೇನೆಯಲ್ಲಿ ಜಮ್ಮು ಕಾಶ್ಮೀರ ಸೇರಿದಂತೆ ದೇಶದ ವಿವಿಧೆಡೆ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು.‌

ಸೇನಾ ನಿವೃತ್ತಿಯ ನಂತರ ತನ್ನೂರಿಗೆ ಬಂದು ಬೆಳ್ತಂಗಡಿ ತಾಲೂಕು ಉಜಿರೆ ಯಲ್ಲಿ ನೆಲೆಸಿ, “ರವಿ ಟ್ರೇಡರ್ಸ್” ಎಂಬ ಉದ್ದಿಮೆ ಸ್ಥಾಪಿಸಿ ಹತ್ತಾರು ಯುವಕರಿಗೆ ಜೀವನೋಪಾಯದ ಹಾದಿಯನ್ನು ಸೃಷ್ಟಿಸುತ್ತಾ ಸೇನೆಗೆ ಸೇರಲು ಬಯಸುವ ಯುವಕರಿಗೆ ಉಚಿತ ಮಾಹಿತಿ ನೀಡುತ್ತಾ ಬರುತ್ತಿದ್ದಾರೆ.
ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾ, ಕೃಷಿ ಕ್ಷೇತ್ರ ದಲ್ಲಿ ವೈಜ್ಞಾನಿಕವಾಗಿ, ಉತ್ತಮ ಆದಾಯ ಪಡೆಯುವ ಆಧುನಿಕ ತಂತ್ರಜ್ಞಾನ ಗಳೊಂದಿಗೆ ಪ್ರಕೃತಿಗೆ ತೊಂದರೆ ಯಾಗದಂತೆ (ಜಲ, ನೆಲ ಉಳಿಸಿ ) ಸಾವಯವ ಕೃಷಿಯನ್ನು ಮಾಡುತ್ತಾ, ಕಂಗು, ತೆಂಗು, ಬಾಳೆ ಕೃಷಿಗಳೊಂದಿಗೆ ಎಲ್ಹೋಟಿಕ್ (exotic) ಹಣ್ಣುಗಳನ್ನು ಬೆಳೆಯುತ್ತಾ, ಪ್ರಾಕೃತಿಕವಾಗಿ ಪ್ರಕೃತಿ ಸಹಜಕ್ರಿಯೆ, ಪರಾಗ ಸ್ಪರ್ಶಕ್ಕೆ ಪೂರಕ ಜೇನುಸಾಕಣೆ ಮಾಡುತ್ತಾ ಹತ್ತು ಹಲವು ಆಸಕ್ತ ಕೃಷಿಕರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಸರ್ಕಾರ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.
ಮಾ.15ರಂದು ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೋಪಾಲಕೃಷ್ಣ ಕಾಂಚೋಡು ಅವರಿಗೆ “ಕೃಷಿಕ ರತ್ನ” ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ಸಚಿವರುಗಳಾದ ಮುರುಗೇಶ್ ನಿರಾಣಿ, ಡಾ. ಸುಧಾಕರ್, ಕೆ.ಸಿ ನಾರಾಯಣ ಗೌಡ ಮೊದಲಾದವರು ಉಪಸ್ಥಿತರಿರುವರು.

Related posts

ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದಶಿಯಾಗಿ ಡಾ.. ಕೆ. ಜಯಕೀರ್ತಿ ಜೈನ್ನೇಮಕ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಘಟಕ : ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಗೌರವ ಪುರಸ್ಕಾರ

Suddi Udaya

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

Suddi Udaya

ಮಾನವೀಯತೆ ಮೆರೆದ ಪಿಕಪ್ ಮಾಲಕ ಸಲೀಂ ಕೊಯ್ಯುರ್

Suddi Udaya
error: Content is protected !!