March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

ತೋಟತ್ತಾಡಿ : ತೋಟತ್ತಾಡಿ ಗ್ರಾಮದ ಮುಂಡಾಯಿಲು ಎಂಬಲ್ಲಿ ಸರಕಾರಿ ಗುಡ್ಡದಲ್ಲಿ ಜುಗಾರಿ ಆಟವಾಡುತ್ತಿದ್ದ
ಅಡ್ಡೆಗೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿ, ,ರೂ.11,870 ಮೌಲ್ಯದ ಸೋತ್ತುಗಳನ್ನು ವಶಪಡಿಸಿಕೊಂಡ ಘಟನೆ ಮಾ.12 ರಂದು ವರದಿಯಾಗಿದೆ.

ಚಾರ್ಮಾಡಿ ಗ್ರಾಮದ  ಅರೆಕಲ್ ಮನೆ ನಿವಾಸಿ ರಹೀಂ ( 44ವರ್ಷ), 

ಮುಂಡಾಜೆ ಗ್ರಾಮದ, ದೇವಗುಡಿ ಮನೆಯ ಫಯಾಜ್‌ ಪಾಷಾ ( 33 ವರ್ಷ), ‌‌ಕಡಿರುದ್ಯಾವರ ಗ್ರಾಮದ,
ಕಾನಪ೯ ನಿವಾಸಿ ರಾಜೇಶ್‌, (46 ವರ್ಷ) ,ತೋಟತ್ತಾಡಿ ಗ್ರಾಮದ‌ ಮುಂಡಾಯಿಲ್‌ ಮನೆಯ
ಅನೀಲ್ ( 45 ವರ್ಷ) ಬಂಧಿತರಾದವರು. ಸಿದ್ದಿಕ್‌ ಯಾನೆ ಅರೆಕಲ್‌ ಸಿದ್ದಿಕ್‌, ಕೃಷ್ಣ ಯಾನೆ ಕಿಟ್ಟ ಗಾಂಧಿನಗರ, ಸಂತೋಷ್‌ ಗಾಂಧಿನಗರ, ಸುಧಾಕರ ಕೊಯಿಕುರಿ ಪೊಲೀಸರ ದಾಳಿ ವೇಳೆ ತಪ್ಪಿಸಿಕೊಂಡಿದ್ದಾರೆ.
ಘಟನೆ ವಿವರ: ತೋಟತ್ತಾಡಿ ಗ್ರಾಮದ ಮುಂಡಾಯಿಲು ಎಂಬಲ್ಲಿ ಸರಕಾರಿ ಗುಡ್ಡದಲ್ಲಿ ಕೆಲವರು ಹಣವನ್ನು ಪಣವಾಗಿಟ್ಟು ಇಸ್ಪೀಟ್‌ ಜುಗಾರಿ ಆಟ ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯನ್ವಯ ಮಾ.22ರಂದು ಬೆಳಗ್ಗಿನ ಜಾವ 3.30 ಗಂಟೆಗೆ ಜುಗಾರಿ ಅಡ್ಡೆಗೆ ಧಾಳಿ ನಡೆಸಿದಾಗ ಆಟ ಆಡುತ್ತಿದ್ದವರು ಅಲ್ಲಿಂದ ಓಡಿ ಹೋಗಲು ಪ್ರಯತ್ನಿಸಿದ್ದು ಓಡಿ ಹೋಗುತ್ತಿದ್ದವರನ್ನು ಪೊಲೀಸರು ಬೆನ್ನಟ್ಟಿ ನಾಲ್ಕು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳದಲ್ಲಿದ್ದ ಪ್ಲಾಸ್ಟಿಕ್‌ ಚಾಪೆ,
ಮೇಣದ ಬತ್ತಿ , ಲೈಟರ್‌ ,
ವಿವಿಧ ಜಾತಿಯ ಇಸ್ಪೀಟ್‌ ಎಲೆಗಳು,
ಒಟ್ಟು ರೂ 7,070 ನಗದು, ಒಂದು ಟಚ್‌ ಸ್ಕ್ರೀನ್‌ ಮೊಬೈಲ್‌, ನಾಲ್ಕು
ಚಿಕ್ಕ ಮೊಬೈಲ್‌ ಪೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೋತ್ತುಗಳ ಒಟ್ಟು ಮೌಲ್ಯ ರೂ.
11,870 ಎಂದು ಅಂದಾಜಿಸಲಾಗಿದೆ.
ಧಮ೯ಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನಾವೂರು ಬಡೆಕ್ಕಾವು ಗುತ್ತುವಿನಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ವೇತನ ಮತ್ತು ಪುಸ್ತಕ ವಿತರಣೆ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಆಡಳಿತ ಮಂಡಳಿಯಿಂದ ಪಿಡಿಒ ಹಾಗೂ ಸಿಬ್ಬಂದಿವರ್ಗಕ್ಕೆ ಅಭಿನಂದನೆ

Suddi Udaya

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಶಿಬಿರಕ್ಕೆ ಸುಲ್ಕೇರಿಯ ಶಶಿಕಾಂತ್ ಆಯ್ಕೆ

Suddi Udaya

ವಾಲಿಬಾಲ್ ಪಂದ್ಯಾಟ; ರಕ್ಷಿತಾ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ: ಲೋಕೋಪಯೋಗಿ ಇಲಾಖೆಯಲ್ಲಿ 38 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿವಪ್ರಸಾದ್ ಅಜಿಲ ದಂಪತಿಗೆ ಊರವರಿಂದ ಪೌರ ಸನ್ಮಾನ, ಷಷ್ಠ್ಯಬ್ಧ ಸಂಭ್ರಮ, ಸಾವಿರಾರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!