25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿ

ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ನಿಡ್ಲೆ
ಪಿಲಿಕಜೆ ನಿವಾಸಿ ದಿನೇಶ ನೇಣು ಬಿಗಿದು ಆತ್ಮಹತ್ಯೆ

ನಿಡ್ಲೆ : ಇಲ್ಲಿಯ ಪಿಲಿಕಜೆ ನಿವಾಸಿ ದಿನೇಶ ( 36 ವ) ಎಂಬವರು ಸುಮಾರು ಒಂದು ವರ್ಷದಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 11 ರಂದು ನಡೆದಿದೆ.
ಮಾ.10 ರಂದು ಮಧ್ಯಾಹ್ನ ಊಟ ಮಾಡಿ ಸಂಜೆ ಸುಮಾರು 3 ಗಂಟೆಯವರೆಗೆ ಮನೆಯಲ್ಲಿ ಇದ್ದವರು ಬಳಿಕ ನಾಪತ್ತೆ ಯಾಗಿದ್ದರು. ರಾತ್ರಿಯಾದರೂ ಮನೆಗೆ ವಾಪಾಸು ಬರಲಿಲ್ಲ .ಎಲ್ಲ ಕಡೆ ಹುಡುಕಿದರೂ ಪತ್ತೆಯಾಗಲಿಲ್ಲ. ಮೂರು ದಿನ ಮಾ.11 ರಂದು ಬೆಳಿಗ್ಗೆ ಮನೆಯವರು ಸೇರಿ ಹುಡುಕಿದಾಗ ಗುಡ್ಡ ಜಾಗದಲ್ಲಿ ಒಂದು ಮರದ ಕೊಂಬೆಗೆ ಸೈಲಾನ್ ಹಗ್ಗದಿಂದ ಕಟ್ಟಿ ಕುತ್ತಿಗೆಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದ್ದು, ದಿನೇಶರವರು ಮಾನಸಿಕ ಖಾಯಿಲೆಯಿಂದ ಬಳಲುತ್ತಿ ದ್ದವರು ಇದೇ ವಿಚಾರದಲ್ಲಿ ಮನನೊಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿ
ರಬಹುದೆಂದು ಸಂಶಯಿಸಲಾಗಿದೆ. ಈ ಬಗ್ಗೆ ಮೃತರ ತಾಯಿ ಲಕ್ಷ್ಮಿ ಅವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣಾ ಯುಡಿಆರ್ ಕ್ರಮಾಂಕ ಮತ್ತು ಕಾನೂನಿನ ಕಲಂ 21/2023 ಕಲಂ: 174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಶಿಶಿಲ: ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ಪ್ರಕರಣ : ಓರ್ವನ ಬಂಧನ

Suddi Udaya

ಅಕ್ರಮವಾಗಿ ಪ್ರವೇಶಿಸಿ ಕಟ್ಟಡ ಕೆಡವಿದ ಪ್ರಕರಣ: ಶಿಬಾಜೆಯ ಮಹಿಳೆಯಿಂದ ಪೊಲೀಸರಿಗೆ ದೂರು

Suddi Udaya

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya

ಗೂಡ್ಸ್ ಟೆಂಪೋ ಡಿಕ್ಕಿ ದ್ವಿಚಕ್ರ ಸವಾರ ಸಾವು

Suddi Udaya

ಕೆಎಸ್ ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ ಹಾಗೂ ದಂಡ ಪ್ರಕಟ

Suddi Udaya

ಶಾಲಾ ವಿದ್ಯಾರ್ಥಿನಿಯನ್ನು. ನಿರ್ಜನ ಪ್ರದೇಶದಲ್ಲಿ ತಡೆದು ಹಲ್ಲೆ : ಜೀವಬೆದರಿಕೆ, ಬಟ್ಟೆ ಹರಿದು ಮಾನಕ್ಕೆ ಕುಂದು ಆರೋಪ ವಿದ್ಯಾರ್ಥಿನಿ ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!