July 23, 2026
ಅಪರಾಧ ಸುದ್ದಿ

ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ನಿಡ್ಲೆ
ಪಿಲಿಕಜೆ ನಿವಾಸಿ ದಿನೇಶ ನೇಣು ಬಿಗಿದು ಆತ್ಮಹತ್ಯೆ

ನಿಡ್ಲೆ : ಇಲ್ಲಿಯ ಪಿಲಿಕಜೆ ನಿವಾಸಿ ದಿನೇಶ ( 36 ವ) ಎಂಬವರು ಸುಮಾರು ಒಂದು ವರ್ಷದಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 11 ರಂದು ನಡೆದಿದೆ.
ಮಾ.10 ರಂದು ಮಧ್ಯಾಹ್ನ ಊಟ ಮಾಡಿ ಸಂಜೆ ಸುಮಾರು 3 ಗಂಟೆಯವರೆಗೆ ಮನೆಯಲ್ಲಿ ಇದ್ದವರು ಬಳಿಕ ನಾಪತ್ತೆ ಯಾಗಿದ್ದರು. ರಾತ್ರಿಯಾದರೂ ಮನೆಗೆ ವಾಪಾಸು ಬರಲಿಲ್ಲ .ಎಲ್ಲ ಕಡೆ ಹುಡುಕಿದರೂ ಪತ್ತೆಯಾಗಲಿಲ್ಲ. ಮೂರು ದಿನ ಮಾ.11 ರಂದು ಬೆಳಿಗ್ಗೆ ಮನೆಯವರು ಸೇರಿ ಹುಡುಕಿದಾಗ ಗುಡ್ಡ ಜಾಗದಲ್ಲಿ ಒಂದು ಮರದ ಕೊಂಬೆಗೆ ಸೈಲಾನ್ ಹಗ್ಗದಿಂದ ಕಟ್ಟಿ ಕುತ್ತಿಗೆಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದ್ದು, ದಿನೇಶರವರು ಮಾನಸಿಕ ಖಾಯಿಲೆಯಿಂದ ಬಳಲುತ್ತಿ ದ್ದವರು ಇದೇ ವಿಚಾರದಲ್ಲಿ ಮನನೊಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿ
ರಬಹುದೆಂದು ಸಂಶಯಿಸಲಾಗಿದೆ. ಈ ಬಗ್ಗೆ ಮೃತರ ತಾಯಿ ಲಕ್ಷ್ಮಿ ಅವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣಾ ಯುಡಿಆರ್ ಕ್ರಮಾಂಕ ಮತ್ತು ಕಾನೂನಿನ ಕಲಂ 21/2023 ಕಲಂ: 174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣ ಎಸ್.ಐ.ಟಿ ಕಚೇರಿ; ಸಹಾಯವಾಣಿ ಆರಂಭ

Suddi Udaya

ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆಯಡ್ಕ ಹಾಟ್ ಮಿಕ್ಸ್ ಮತ್ತು ಕಾಂಕ್ರೀಟ್ ಮಿಶ್ರಣ ಘಟಕಕ್ಕೆಪುತ್ತೂರು ಎ.ಸಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ಸ್ಥಳ ಪರಿಶೀಲನೆ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya

ಹಾಡುಹಗಲೇ ರೂ.3.11 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಕಲ್ಮಂಜ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ

Suddi Udaya
error: Content is protected !!