23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ನಿಡ್ಲೆ
ಪಿಲಿಕಜೆ ನಿವಾಸಿ ದಿನೇಶ ನೇಣು ಬಿಗಿದು ಆತ್ಮಹತ್ಯೆ

ನಿಡ್ಲೆ : ಇಲ್ಲಿಯ ಪಿಲಿಕಜೆ ನಿವಾಸಿ ದಿನೇಶ ( 36 ವ) ಎಂಬವರು ಸುಮಾರು ಒಂದು ವರ್ಷದಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 11 ರಂದು ನಡೆದಿದೆ.
ಮಾ.10 ರಂದು ಮಧ್ಯಾಹ್ನ ಊಟ ಮಾಡಿ ಸಂಜೆ ಸುಮಾರು 3 ಗಂಟೆಯವರೆಗೆ ಮನೆಯಲ್ಲಿ ಇದ್ದವರು ಬಳಿಕ ನಾಪತ್ತೆ ಯಾಗಿದ್ದರು. ರಾತ್ರಿಯಾದರೂ ಮನೆಗೆ ವಾಪಾಸು ಬರಲಿಲ್ಲ .ಎಲ್ಲ ಕಡೆ ಹುಡುಕಿದರೂ ಪತ್ತೆಯಾಗಲಿಲ್ಲ. ಮೂರು ದಿನ ಮಾ.11 ರಂದು ಬೆಳಿಗ್ಗೆ ಮನೆಯವರು ಸೇರಿ ಹುಡುಕಿದಾಗ ಗುಡ್ಡ ಜಾಗದಲ್ಲಿ ಒಂದು ಮರದ ಕೊಂಬೆಗೆ ಸೈಲಾನ್ ಹಗ್ಗದಿಂದ ಕಟ್ಟಿ ಕುತ್ತಿಗೆಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದ್ದು, ದಿನೇಶರವರು ಮಾನಸಿಕ ಖಾಯಿಲೆಯಿಂದ ಬಳಲುತ್ತಿ ದ್ದವರು ಇದೇ ವಿಚಾರದಲ್ಲಿ ಮನನೊಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿ
ರಬಹುದೆಂದು ಸಂಶಯಿಸಲಾಗಿದೆ. ಈ ಬಗ್ಗೆ ಮೃತರ ತಾಯಿ ಲಕ್ಷ್ಮಿ ಅವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣಾ ಯುಡಿಆರ್ ಕ್ರಮಾಂಕ ಮತ್ತು ಕಾನೂನಿನ ಕಲಂ 21/2023 ಕಲಂ: 174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರಿನಿಂದ ಬಸ್ ತಡೆಹಿಡಿದು ಗಲಾಟೆ

Suddi Udaya

ತುಮಕೂರಿನಲ್ಲಿ ಕಾರಿಗೆ ಬೆಂಕಿ ಮೂವರ ಕೊಲೆ ಪ್ರಕರಣ: ತುಮಕೂರು ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ: ಮುರುಡೇಶ್ವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು

Suddi Udaya

ಪುತ್ತೂರಿನ ಮುರದಲ್ಲಿ ರೈಲು ಡಿಕ್ಕಿಯಾಗಿ ಮೃತಪಟ್ಟ ವ್ಯಕ್ತಿ: ನ್ಯಾಯತರ್ಪು ಪಾಂಡಿಬೆಟ್ಟು ನಿವಾಸಿ ಶಿವರಾಮ ಗೌಡ ಎಂದು ಗುರುತು ಪತ್ತೆ

Suddi Udaya

ಉಜಿರೆ: ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರಪರಾಧಿ ಸಿಬಿಐ ನ್ಯಾಯಾಲಯ ಆದೇಶ

Suddi Udaya

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!