ತಾಲೂಕು ಸುದ್ದಿರಾಷ್ಟ್ರೀಯ ಸುದ್ದಿ

ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ

ಬೆಳ್ತಂಗಡಿ: ಮೈಸೂರು- ಬೆಂಗಳೂರು ದಶಪಥ ಹೆದ್ದಾರಿ ಉದ್ಘಾಟನೆ ಬಳಿಕ ಮದ್ದೂರಿನ ಗೆಜ್ಜಲಗೆರೆಯಲ್ಲಿ ನಿನ್ನೆ ಮಾ.12ರಂದು ನಡೆದ ಬೃಹತ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹಿಂದಿ ಭಾಷಣವನ್ನು ಕನ್ನಡಕ್ಕೆ ಭಾಷಾಂತರಿಸಿದ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮೋದಿಯವರಿಂದ ಭೇಷ್ ಎನಿಸಿಕೊಂಡಿದ್ದಾರೆ.

ಮದ್ದೂರಿನ ಗೆಜ್ಜಲಗೆರೆಯಲ್ಲಿ ಭಾನು ವಾರ ಬೃಹತ್ ಸಮಾವೇಶದಲ್ಲಿ ಪ್ರಧಾನಿ ಮೋದಿಯವರು ಹಿಂದಿಯಲ್ಲಿ ಭಾಷಣ ಮಾಡಿದರು. ಹೆಚ್ಚಾಗಿ ಎಲ್ಲಿಯೂ ಅವರ ಭಾಷಣವನ್ನು ಸ್ಥಳೀಯ ಭಾಷೆಗೆ ಭಾಷಾಂತರ ಮಾಡುವ ಪದ್ಧತಿ ಇರುವುದಿಲ್ಲ. ಆದರೆ ಮಂಡ್ಯದಲ್ಲಿ ಭಾಷಾಂತರಿಸುವ ಅನಿವಾರ್ಯತೆ ಉಂಟಾಯಿತು. ಭಾಷಾಂತರಕ್ಕೆ ಆಯ್ಕೆ ಮಾಡಿದ್ದು ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಈ ಹಿಂದೆ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಹಾಗೂ ಕೆಲ ಸಮಯದ ಹಿಂದೆ ಮಲೆಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರ ಹಿಂದಿ ಭಾಷಣವನ್ನು ಸಮರ್ಥವಾಗಿ ಕನ್ನಡೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಮೋದಿ ಅವರ ಭಾಷಣವನ್ನು ಕನ್ನಡಕ್ಕೆ ಭಾಷಾಂತರಿಸುವ ಭಾಗ್ಯ ಅವರದ್ದಾಯಿತು.

ಸುಮಾರು ಅರ್ಧ ಗಂಟೆ ಸಹಸ್ರಾರು ಸಭಿಕರ ಮುಂದೆ ಪ್ರಧಾನಿ ಸಮಕ್ಷಮದಲ್ಲಿ ಮೊದಲ ಬಾರಿಗೆ ಪ್ರತಾಪಸಿಂಹ ನಾಯಕರು ನಿರರ್ಗಳವಾಗಿ ಹಿಂದಿ ಭಾಷಣದ ಯಥಾವತ್ ತರ್ಜುಮೆ ಮಾಡಿ ಸೈ ಎನಿಸಿಕೊಂಡರು.

ಸಭೆಯ ಬಳಿಕ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಪ್ರತಾಪಸಿಂಹ ನಾಯಕ್‌ ಅವರ ಬೆನ್ನು ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ಬೆಳ್ತಂಗಡಿ: ಜೈನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಮಹಾರಥೋತ್ಸವ: ಅರುಣ್ ಕುಮಾರ್ ಪುತ್ತಿಲ ಭಾಗಿ

Suddi Udaya

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya

ಗುರುವಾಯನಕೆರೆ :ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಓರಿಯೆಂಟೇಶನ್

Suddi Udaya

ಅಂಡಿಂಜೆ ಗ್ರಾ.ಪಂ. ನಿಸರ್ಗ ಸಂಜೀವಿನಿ ಒಕ್ಕೂಟದಿಂದ ವ್ಯಾಪಾರ ಅಭಿವೃದ್ಧಿ ಯೋಜನೆ ತರಬೇತಿ ಕಾರ್ಯಾಗಾರ

Suddi Udaya
error: Content is protected !!