April 2, 2025
ತಾಲೂಕು ಸುದ್ದಿರಾಷ್ಟ್ರೀಯ ಸುದ್ದಿ

ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ

ಬೆಳ್ತಂಗಡಿ: ಮೈಸೂರು- ಬೆಂಗಳೂರು ದಶಪಥ ಹೆದ್ದಾರಿ ಉದ್ಘಾಟನೆ ಬಳಿಕ ಮದ್ದೂರಿನ ಗೆಜ್ಜಲಗೆರೆಯಲ್ಲಿ ನಿನ್ನೆ ಮಾ.12ರಂದು ನಡೆದ ಬೃಹತ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹಿಂದಿ ಭಾಷಣವನ್ನು ಕನ್ನಡಕ್ಕೆ ಭಾಷಾಂತರಿಸಿದ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮೋದಿಯವರಿಂದ ಭೇಷ್ ಎನಿಸಿಕೊಂಡಿದ್ದಾರೆ.

ಮದ್ದೂರಿನ ಗೆಜ್ಜಲಗೆರೆಯಲ್ಲಿ ಭಾನು ವಾರ ಬೃಹತ್ ಸಮಾವೇಶದಲ್ಲಿ ಪ್ರಧಾನಿ ಮೋದಿಯವರು ಹಿಂದಿಯಲ್ಲಿ ಭಾಷಣ ಮಾಡಿದರು. ಹೆಚ್ಚಾಗಿ ಎಲ್ಲಿಯೂ ಅವರ ಭಾಷಣವನ್ನು ಸ್ಥಳೀಯ ಭಾಷೆಗೆ ಭಾಷಾಂತರ ಮಾಡುವ ಪದ್ಧತಿ ಇರುವುದಿಲ್ಲ. ಆದರೆ ಮಂಡ್ಯದಲ್ಲಿ ಭಾಷಾಂತರಿಸುವ ಅನಿವಾರ್ಯತೆ ಉಂಟಾಯಿತು. ಭಾಷಾಂತರಕ್ಕೆ ಆಯ್ಕೆ ಮಾಡಿದ್ದು ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಈ ಹಿಂದೆ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಹಾಗೂ ಕೆಲ ಸಮಯದ ಹಿಂದೆ ಮಲೆಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರ ಹಿಂದಿ ಭಾಷಣವನ್ನು ಸಮರ್ಥವಾಗಿ ಕನ್ನಡೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಮೋದಿ ಅವರ ಭಾಷಣವನ್ನು ಕನ್ನಡಕ್ಕೆ ಭಾಷಾಂತರಿಸುವ ಭಾಗ್ಯ ಅವರದ್ದಾಯಿತು.

ಸುಮಾರು ಅರ್ಧ ಗಂಟೆ ಸಹಸ್ರಾರು ಸಭಿಕರ ಮುಂದೆ ಪ್ರಧಾನಿ ಸಮಕ್ಷಮದಲ್ಲಿ ಮೊದಲ ಬಾರಿಗೆ ಪ್ರತಾಪಸಿಂಹ ನಾಯಕರು ನಿರರ್ಗಳವಾಗಿ ಹಿಂದಿ ಭಾಷಣದ ಯಥಾವತ್ ತರ್ಜುಮೆ ಮಾಡಿ ಸೈ ಎನಿಸಿಕೊಂಡರು.

ಸಭೆಯ ಬಳಿಕ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಪ್ರತಾಪಸಿಂಹ ನಾಯಕ್‌ ಅವರ ಬೆನ್ನು ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya
error: Content is protected !!