ತಾಲೂಕು ಸುದ್ದಿರಾಷ್ಟ್ರೀಯ ಸುದ್ದಿ

ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ

ಬೆಳ್ತಂಗಡಿ: ಮೈಸೂರು- ಬೆಂಗಳೂರು ದಶಪಥ ಹೆದ್ದಾರಿ ಉದ್ಘಾಟನೆ ಬಳಿಕ ಮದ್ದೂರಿನ ಗೆಜ್ಜಲಗೆರೆಯಲ್ಲಿ ನಿನ್ನೆ ಮಾ.12ರಂದು ನಡೆದ ಬೃಹತ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹಿಂದಿ ಭಾಷಣವನ್ನು ಕನ್ನಡಕ್ಕೆ ಭಾಷಾಂತರಿಸಿದ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮೋದಿಯವರಿಂದ ಭೇಷ್ ಎನಿಸಿಕೊಂಡಿದ್ದಾರೆ.

ಮದ್ದೂರಿನ ಗೆಜ್ಜಲಗೆರೆಯಲ್ಲಿ ಭಾನು ವಾರ ಬೃಹತ್ ಸಮಾವೇಶದಲ್ಲಿ ಪ್ರಧಾನಿ ಮೋದಿಯವರು ಹಿಂದಿಯಲ್ಲಿ ಭಾಷಣ ಮಾಡಿದರು. ಹೆಚ್ಚಾಗಿ ಎಲ್ಲಿಯೂ ಅವರ ಭಾಷಣವನ್ನು ಸ್ಥಳೀಯ ಭಾಷೆಗೆ ಭಾಷಾಂತರ ಮಾಡುವ ಪದ್ಧತಿ ಇರುವುದಿಲ್ಲ. ಆದರೆ ಮಂಡ್ಯದಲ್ಲಿ ಭಾಷಾಂತರಿಸುವ ಅನಿವಾರ್ಯತೆ ಉಂಟಾಯಿತು. ಭಾಷಾಂತರಕ್ಕೆ ಆಯ್ಕೆ ಮಾಡಿದ್ದು ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಈ ಹಿಂದೆ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಹಾಗೂ ಕೆಲ ಸಮಯದ ಹಿಂದೆ ಮಲೆಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರ ಹಿಂದಿ ಭಾಷಣವನ್ನು ಸಮರ್ಥವಾಗಿ ಕನ್ನಡೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಮೋದಿ ಅವರ ಭಾಷಣವನ್ನು ಕನ್ನಡಕ್ಕೆ ಭಾಷಾಂತರಿಸುವ ಭಾಗ್ಯ ಅವರದ್ದಾಯಿತು.

ಸುಮಾರು ಅರ್ಧ ಗಂಟೆ ಸಹಸ್ರಾರು ಸಭಿಕರ ಮುಂದೆ ಪ್ರಧಾನಿ ಸಮಕ್ಷಮದಲ್ಲಿ ಮೊದಲ ಬಾರಿಗೆ ಪ್ರತಾಪಸಿಂಹ ನಾಯಕರು ನಿರರ್ಗಳವಾಗಿ ಹಿಂದಿ ಭಾಷಣದ ಯಥಾವತ್ ತರ್ಜುಮೆ ಮಾಡಿ ಸೈ ಎನಿಸಿಕೊಂಡರು.

ಸಭೆಯ ಬಳಿಕ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಪ್ರತಾಪಸಿಂಹ ನಾಯಕ್‌ ಅವರ ಬೆನ್ನು ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ನಾರಾವಿ ಗ್ರಾಮ ಪಂಚಾಯತ್ ನ ಎದುರು ಬಿಜೆಪಿ ಪ್ರತಿಭಟನೆ

Suddi Udaya

ಕಲ್ಮಂಜ: ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೈನಿಕರ ಸುರಕ್ಷತೆಗಾಗಿ ವಿಪ್ರಬಾಂಧವರಿಂದ ರುದ್ರಪಾರಾಯಣ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಎಸ್‌ಡಿಎಂ ಶಾಲಾ ವಿದ್ಯಾರ್ಥಿನಿ ಅನೀಶ ಆರೋಲ್‌ಗೆ ಚಿನ್ನದ ಪದಕ

Suddi Udaya

ಮಿತ್ತಬಾಗಿಲು: ವಳಗುಡ್ಡೆ ನಿವಾಸಿ ಕೃಷ್ಣ ಗೌಡ ನಿಧನ

Suddi Udaya
error: Content is protected !!