ತಾಲೂಕು ಸುದ್ದಿರಾಷ್ಟ್ರೀಯ ಸುದ್ದಿ

ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ

ಬೆಳ್ತಂಗಡಿ: ಮೈಸೂರು- ಬೆಂಗಳೂರು ದಶಪಥ ಹೆದ್ದಾರಿ ಉದ್ಘಾಟನೆ ಬಳಿಕ ಮದ್ದೂರಿನ ಗೆಜ್ಜಲಗೆರೆಯಲ್ಲಿ ನಿನ್ನೆ ಮಾ.12ರಂದು ನಡೆದ ಬೃಹತ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹಿಂದಿ ಭಾಷಣವನ್ನು ಕನ್ನಡಕ್ಕೆ ಭಾಷಾಂತರಿಸಿದ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮೋದಿಯವರಿಂದ ಭೇಷ್ ಎನಿಸಿಕೊಂಡಿದ್ದಾರೆ.

ಮದ್ದೂರಿನ ಗೆಜ್ಜಲಗೆರೆಯಲ್ಲಿ ಭಾನು ವಾರ ಬೃಹತ್ ಸಮಾವೇಶದಲ್ಲಿ ಪ್ರಧಾನಿ ಮೋದಿಯವರು ಹಿಂದಿಯಲ್ಲಿ ಭಾಷಣ ಮಾಡಿದರು. ಹೆಚ್ಚಾಗಿ ಎಲ್ಲಿಯೂ ಅವರ ಭಾಷಣವನ್ನು ಸ್ಥಳೀಯ ಭಾಷೆಗೆ ಭಾಷಾಂತರ ಮಾಡುವ ಪದ್ಧತಿ ಇರುವುದಿಲ್ಲ. ಆದರೆ ಮಂಡ್ಯದಲ್ಲಿ ಭಾಷಾಂತರಿಸುವ ಅನಿವಾರ್ಯತೆ ಉಂಟಾಯಿತು. ಭಾಷಾಂತರಕ್ಕೆ ಆಯ್ಕೆ ಮಾಡಿದ್ದು ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಈ ಹಿಂದೆ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಹಾಗೂ ಕೆಲ ಸಮಯದ ಹಿಂದೆ ಮಲೆಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರ ಹಿಂದಿ ಭಾಷಣವನ್ನು ಸಮರ್ಥವಾಗಿ ಕನ್ನಡೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಮೋದಿ ಅವರ ಭಾಷಣವನ್ನು ಕನ್ನಡಕ್ಕೆ ಭಾಷಾಂತರಿಸುವ ಭಾಗ್ಯ ಅವರದ್ದಾಯಿತು.

ಸುಮಾರು ಅರ್ಧ ಗಂಟೆ ಸಹಸ್ರಾರು ಸಭಿಕರ ಮುಂದೆ ಪ್ರಧಾನಿ ಸಮಕ್ಷಮದಲ್ಲಿ ಮೊದಲ ಬಾರಿಗೆ ಪ್ರತಾಪಸಿಂಹ ನಾಯಕರು ನಿರರ್ಗಳವಾಗಿ ಹಿಂದಿ ಭಾಷಣದ ಯಥಾವತ್ ತರ್ಜುಮೆ ಮಾಡಿ ಸೈ ಎನಿಸಿಕೊಂಡರು.

ಸಭೆಯ ಬಳಿಕ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಪ್ರತಾಪಸಿಂಹ ನಾಯಕ್‌ ಅವರ ಬೆನ್ನು ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಲಾಯಿಲ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕಂಡೊದ ಕಲೊಟ್ಟು ಬಿರುವೆರೆ ಗೊಬ್ಬು

Suddi Udaya

ಬೆಳ್ತಂಗಡಿ: “ಗೃಹಜ್ಯೋತಿ ಹೆಚ್ಚುವರಿ ಮಾಹಿತಿ ಸಂಗ್ರಹಣೆಯ” ಪ್ರಗತಿ ಸಭೆ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಾತಿ ವಿಚಾರವನ್ನು ಕೆದಕಿ ಅಪಮಾನಿಸಿರುವುದನ್ನು ಖಂಡಿಸಿ,ರಾಹುಲ್ ಗಾಂಧಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿ, ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಗೆ ಮನವಿ

Suddi Udaya

ಆಪರೇಷನ್ ಸಿಂಧೂರ್” – ಪಹಲ್ಗಾಮ್ ದಾಳಿಗೆ ಪ್ರತೀಕಾರ

Suddi Udaya

ಪಡಂಗಡಿ: ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ: ಸಂತಾನಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!