30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಉಜಿರೆ ಪೇಟೆಗೆ ಬಂದಿದ್ದ ನೇತ್ರಾವತಿ ನಿವಾಸಿ ಕುಸಿದು ಬಿದ್ದು ಮೃತ್ಯು


ಬೆಳ್ತಂಗಡಿ : ಉಜಿರೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದ ವ್ಯಕ್ತಿಯೋವ೯ರು ಉಜಿರೆ ಬಸ್ಸು ನಿಲ್ದಾಣದ ಬಳಿ ಕುಸಿದು ಬಿದ್ದು ಸಾವನ್ನಪ್ಪಿದ ದುಘ೯ಟನೆ ಮಾ.12ರಂದು ವರದಿಯಾಗಿದೆ ಧಮ೯ಸ್ಥಳದ ಗ್ರಾಮದ ನೇತ್ರಾವತಿ ಮನೆ ನಿವಾಸಿ ನಾರಾಯಣ ಆಚಾಯ೯ (80ವ) ಸಾವನ್ನಪ್ಪದವರು. ಮಾ.12 ರಂದು ಉಜಿರೆಗೆ ಹೋಗಿ ಬರುತ್ತೇನೆಂದು ಹೋದವರು ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಮರುದಿನ ಮಾ.13 ರಂದು ಪರಿಚಯದವರೋವ೯ರು ಅವರ ಪುತ್ರ ರಾಘವ ಆಚಾಯ೯ ದೂರವಾಣಿ ಕರೆಮಾಡಿ ನಿಮ್ಮ ತಂದೆ ಉಜಿರೆ ಗ್ರಾಮದ ಬಸ್ಸು ನಿಲ್ದಾಣದ ಬಳಿ ಕುಸಿದು ಬಿದ್ದು ಮೃತಪಟ್ಟಿರುತ್ತಾರೆ ಎಂಬುದಾಗಿ ತಿಳಿಸಿದ್ದರು. ಅದರಂತೆ ಅವರ ಮನೆಯವರು ಸ್ಥಳಕ್ಕೆ ಬಂದು ನೋಡಿದಾಗ ಮಲಗಿದ ಸ್ಥಿತಿಯಲ್ಲಿದ್ದವರನ್ನು ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದಾಗ ವೈದ್ಯರು ಪರೀಕ್ಷಿಸಿ, ಮೃತಪಟ್ಟಿರುವುದಾಗಿ ತಿಳಿದರು. ಈ ಬಗ್ಗೆ ರಾಘವ ಆಚಾಯ೯ ಅವರು ನೀಡಿದ ದೂರರಿನಂತೆ ಧಮ೯ಸ್ಥಳ ಠಾಣೆಯಲ್ಲಿ ಯುಡಿಆರ್ ಸಂ 10/2023 ಕಲಂ:174 ಸಿಆರ್ ಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya

ಇಳಂತಿಲ ಅಂಡೆತಡ್ಕ ಮನೆ ನಿವಾಸಿ ಅರುಣ್ ನಾಪತ್ತೆ

Suddi Udaya

ಬೆಳ್ತಂಗಡಿ : ಕೊಯ್ಯೂರಿನಲ್ಲಿ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ ಆರೋಪಿ ಉಜ್ಜಲ್ ಗೌಡನಿಗೆ ಜಾಮೀನು ಮಂಜೂರು

Suddi Udaya

ಕರಿಮಣೇಲಿನ ಯುವತಿ ನಾಪತ್ತೆ: ಪೊಲೀಸ್ ದೂರು ದಾಖಲು

Suddi Udaya

ವೇಣೂರು: ಅಕ್ರಮ ಮರಳು ಸಾಗಟ: ರೂ.6 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

ಶ್ರೀರಾಮ ಕ್ರೆಡಿಟ್ ಕೋ ಆಪರೇಟ್ ಸೊಸೈಟಿನಲ್ಲಿ ಗ್ರಾಹಕರ ಹಣ ವಂಚನೆ ಪ್ರಕರಣ: ತನಿಖೆಗಾಗಿ ಬ್ಯಾಂಕಿಗೆ ಎಂಟ್ರಿಯಾದ ಸಿಐಡಿ ತಂಡ

Suddi Udaya
error: Content is protected !!