25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿ

ಕಕ್ಕಿಂಜೆಯ ಜೆ.ಕೆ ಎಲೆಕ್ಟ್ರಿಕಲ್ಸ್‌ ಮತ್ತು ವೈಂಡಸಸ್‌೯ ಅಂಗಡಿಯಿಂದ
ರೂ.94 ಸಾವಿರ ಮೌಲ್ಯದ 20 ಕೆ.ಜಿ ಸ್ಕ್ರಾಪ್‌ ಮತ್ತು ದುರಸ್ತಿಗೆ ಬಂದ ಪಂಪುಗಳ ಕಳವು


ಕಕ್ಕಿಂಜೆ: ಚಿಬಿದ್ರೆಯ ಜೆ.ಕೆ ಎಲೆಕ್ಟ್ರಿಕಲ್ಸ್‌ ಮತ್ತು ವೈಂಡಸ್‌೯ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು ಅಂಗಡಿಯೊಳಗಿದ್ದ ಕಾಫರ್‌ ವೇರ್‌(ಸ್ಕ್ರಾಪ್‌) ಹಾಗೂ ಬೋರ್‌ವೆಲ್‌ ಸಬ್‌ ಮಸಿ೯ಬಲ್‌ ಮತ್ತು ಮಸಿ೯ಬಲ್‌ ಮೋಟಾರ್‌ ಸೇರಿದಂತೆ ಸುಮಾಋು 94 ಸಾವಿರ ಮೌಲ್ಯದ ಸೊತ್ತುಗಳನ್ನು ಕಳವು ಗೈದ ಘಟನೆ ಮಾ.12ರಂದು ವರದಿಯಾಗಿದೆ.
ತೋಟತ್ತಾಡಿ ಗ್ರಾಮದ ಡೊಂಬರಮಜಲು ಮನೆ ನಿವಾಸಿ ಜಯಾನಂದ ಡಿ. ಪೂಜಾರಿ ಅವರ ಮಾಲಕತ್ವದ ಜಿ.ಕೆ ಅಂಗಡಿಯಿಂದ ಈ ಸೊತ್ತುಗಳನ್ನು ಕಳವುಗೈಯ್ಯಲಾಗಿದೆ. ಅವರು ಚಿಬಿದ್ರೆಯಲ್ಲಿ ಜೆ.ಕೆ ಎಲೆಕ್ಟ್ರಿಕ್‌ಲ್ಸ್‌ ಮತ್ತು ವೈಂಡರ್ಸ್‌ ಅಂಗಡಿ ಹೊಂದಿದ್ದು, ಮಾ.11 ರಂದು ರಾತ್ರಿ 11 ಗಂಟೆಯವರೆಗೆ ಕೆಲಸ ಮಾಡಿ, ಅಂಗಡಿಗೆ ಬೀಗ ಹಾಕಿ ಮನೆಗೆ ಬಂದಿದ್ದರು. ಮರುದಿನ ಮಾ.12 ರಂದು ಬೆಳಿಗ್ಗೆ ಅಂಗಡಿಗೆ ಬಂದು ನೋಡಿದಾಗ ಯಾರೋ ಕಳ್ಳರು ಅವರ ಅಂಗಡಿಗೆ ಹಾಕಿದ್ದ ಬೀಗವನ್ನು ಮುರಿದು ಒಳಪ್ರವೇಶಿಸಿ ಅಂಗಡಿಯಲ್ಲಿದ್ದ Coper wire(ಸ್ಕ್ರಾಪ್‌ ) 20 ಕೆ. ಜಿ ಮತ್ತು ರಿಪೇರಿಗೆ ತಂದಿದ್ದ ಬೋರ್‌ವೆಲ್‌ನ ಸಬ್‌ಮರ್ಸಿಬಲ್‌ ಮೋಟಾರ್‌ಗಳು (6/5 HP) 11 ಹಾಗೂ ಸಿಂಗಲ್‌ ಪೇಸ್‌ 2HP ಮರ್ಸಿಬಲ್‌ 2 ಮೋಟಾರ್‌ಗಳನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿತ್ತು. ಕಳವಾದ ಸೊತ್ತುಗಳ ಮೌಲ್ಯ ರೂ 94 ಸಾವಿರ ಎಂದು ಅಂದಾಜಿಸಲಾಗಿದೆ. ಜಯಾನಂದ ಅವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್‌ ಠಾಣೆ 15/2023 ಕಲಂ: 457,380 ಐ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಪಟ್ರಮೆ ಪಟ್ಟೂರಿನ ನೆರೆಕರೆಯ ಇಬ್ಬರು ಯುವತಿಯರು ಒಂದೇ ದಿನ ಮೃತ್ಯು: ಹೊಟ್ಟೆನೋವಿನಿಂದ ಅಸ್ವಸ್ಥಗೊಂಡಿದ್ದ ರಕ್ಷಿತಾ ಹಾಗೂ ಲಾವಣ್ಯ

Suddi Udaya

ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ | ಬೆಳ್ತಂಗಡಯ ಇಬ್ಬರು ಮಂಗಳೂರು ಸಿಸಿಬಿ ಬಲೆಗೆ ರೂ. 3.2 ಕೋಟಿ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ

Suddi Udaya

ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಅನನ್ಯ ಭಟ್ ನಾಪತ್ತೆ ಎಂಬ ವಿಷಯವೇ ಸುಳ್ಳು: ಸುಜಾತ ಭಟ್ ಸ್ವಷ್ಟನೆ

Suddi Udaya

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ. ಪಡೆದು ಕೊಕ್ಕಡದ ಮಹಿಳೆಗೆ ರೂ.1.50ಲಕ್ಷ. ವಂಚನೆ

Suddi Udaya

ಬೆಳ್ತಂಗಡಿ: ಬುರುಡೆ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ಸೆ.16 ಕ್ಕೆ ಬೆಲ್ ಅದೇಶ ಕಾಯ್ದಿರಿಸಿದ ಬೆಳ್ತಂಗಡಿ ಕೋರ್ಟ್

Suddi Udaya
error: Content is protected !!