July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮುಂಡಾಜೆಯಲ್ಲಿ ಕೂಲಿ ಕೆಲಸಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು

ಮುಂಡಾಜೆ : ಕೂಲಿ ಕೆಲಸಕ್ಕೆಂದು ಹೋದ ಮಹಿಳೆಯೋವ೯ರು ಕುಸಿದು ಬಿದ್ದು, ಪ್ರಜ್ಞೆ ತಪ್ಪಿದವರನ್ನು ಕೂಡಲೇ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದ ದಾಖಲಿಸಿ, ಚಿಕಿತ್ಸೆ ನೀಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಾ.12ರಂದು ವರದಿಯಾಗಿದೆ.


ಮುಂಡಾಜೆ ಗ್ರಾಮದ ಸನ್ಯಾಸಿಕಟ್ಟೆ ನಿವಾಸಿ ಪಾವ೯ತಿ (55ವ) ಈ ದುಘ೯ಟನೆಯಲ್ಲಿ ಮೃತಪಟ್ಟವರಾಗಿದ್ದಾರೆ. ಅವರು ಮುಂಡಾಜೆ ಗ್ರಾಮದ ಸೊಮಂತ್ತಡ್ಕ ಗಣೇಶ ಎಂಬವರ ಮನೆಗೆ ಕೂಲಿ ಕೆಲಸಕ್ಕೆಂದು ಹೋಗುತ್ತೇನೆಂದು ಮನೆಯಲ್ಲಿ ಹೇಳಿ ಹೋಗಿದ್ದರು. ಅಲ್ಲಿ ಕೆಲಸ ಮಾಡುತ್ತಿರುವ ಸಮಯ ಸಂಜೆ ಒಮ್ಮೆಲೇ ಕುಸಿದು ಬಿದ್ದು, ಪ್ರಜ್ಞೆಯನ್ನು ಕಳೆದುಕೊಂಡರು. ಅವರನ್ನು ಆರೈಕೆ ಮಾಡಿ ಕೂಡಲೇ ಚಿಕಿತ್ಸೆಗೆ ಬಗ್ಗೆ ಕಕ್ಕಿಂಜೆ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದಿದ್ದುದರಿಂದ, ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿನ ವೈದ್ಯರ ಸಲಹೆಯಂತೆ ಕೂಡಲೇ ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ಚಿಕಿತ್ಸೆ ನೀಡಿದರೂ, ಫಲಕಾರಿಯಾಗದೇ ಅವರು ಆಸ್ಪತ್ರೆಯಲ್ಲಿ ಮೃತಪಟ್ಟರೆನ್ನಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪುತ್ರಿ ಪುಷ್ಪಾ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆಯ ಅಕ್ಕ ಕೆಫೆಗೆ ಭೇಟಿ

Suddi Udaya

ಜೂ.18: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಕುಕ್ಕೇಡಿ ಬುಲೆಕ್ಕಾರ ಶಾಲೆಯ ಮಕ್ಕಳಿಂದ ನೇಜಿ ನಾಟಿ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

Suddi Udaya

ಶ್ರೀ ಧ. ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಕರಕುಶಲ ಕಲೆಗಳ ಬಗ್ಗೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

Suddi Udaya
error: Content is protected !!