July 23, 2026
ಗ್ರಾಮಾಂತರ ಸುದ್ದಿ

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

ಚಾಮಾ೯ಡಿ: ರಸ್ತೆ ಹಾಗೂ ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟುಕೊಂಡು ಇದೀಗ ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸುವುದಾಗಿ ಮುಂದಾಗಿದ್ದಾರೆ.
ಚಾರ್ಮಾಡಿಯ ಮಸಣ ಗುಡ್ಡೆ, ಗಾಂದೀನಗರ ಪರಿಸರದಲ್ಲಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ, ಕುಡಿಯಲು ನೀರೂ ಇಲ್ಲವಾಗಿದೆ. ಈ ಬಗ್ಗೆ ಹಲವಾರು ಬಾರಿ ಜನಪ್ರತಿನಿಧಿಗಳ ಗಮನ ಸೆಳೆದರೂ ಇನ್ನೂ ರಸ್ತೆ ದುರಸ್ತಿಯಾಗಿಲ್ಲ, ನೀರಿನ ವ್ಯವಸ್ಥೆಯನ್ನು ಸರಿಪಡಿಸಲಾಗಿಲ್ಲ, ಈ ಬಗ್ಗೆ ಭರವಸೆಗಳನ್ನು ಕೇಳಿ ಸಾಕಾಗಿದೆ ಆದ್ದರಿಂದ ಈ ಬಾರಿಯ ಚಿನಾವಣೆಯಲ್ಲಿ ಮತದಾನದಲ್ಲಿ ಭಾಗವಹಿಸುವುದಿಲ್ಲ ಎಂದು ಈ ಪ್ರದೇಶದ ಜನರು ಪ್ರಕಟಿಸಿದ್ದಾರೆ. ನಮಗೆ ರಸ್ತೆ ಮತ್ತು ನೀರಿನ ವ್ಯವಸ್ಥೆಯನ್ನು ಮಾಡಿಕೊಟ್ಟರೆ ಮಾತ್ರ ರಾಜಕಾರಣಿಗಳು ಮತ ಕೇಳಲು ಇಲ್ಲಿಗೆ ಬಂದರೆ ಸಾಕು ಎಂಬುದು ಇಲ್ಲಿನ ಜನರ

ಒತ್ತಾಯವಾಗಿದೆ. ಈ ಪ್ರದೇಶದಲ್ಲಿ ಸುಮಾರು 100ರಷ್ಟು ಮನೆಗಳಿವೆ ಪ್ರತಿಬೇಸಗೆಯಲ್ಲಿಯೂ ಕುಡಿಯುವ ನೀರಿಗಾಗಿ ಪರದಾಡಬೇಕಾದ ಸ್ಥಿತಿ ಇಲ್ಲಿನ ನಿವಾಸಿಗಳದ್ದಾಗಿದೆ.ಜನರು ತಾವು ಚುನಾವಣಾ ಬಹಿಷ್ಕಾರ ಮಾಡುವುದಾಗಿ ಪ್ರಕಟಿಸಿದ್ದು ರಾಜಕೀಯ ಮುಖಂಡರುಗಳು ಇದಕ್ಕೆ ಯಾವ ರೀತಿ ಸ್ಪಂದಿಸುವರು ಕಾದು ನೋಡಬೇಕಾಗಿದೆ

Related posts

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷತೆ ಹಾಗೂ ಅಡಿಕೆ ಮರ ಹತ್ತುವ ಯಂತ್ರ ವಿತರಣೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಕುಂಭಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿಶ್ವಾಸ್ ಶೆಟ್ಟಿಗೆ ಚಿನ್ನದ ಪದಕ

Suddi Udaya

ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ: ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ

Suddi Udaya

ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!