September 6, 2026
ಗ್ರಾಮಾಂತರ ಸುದ್ದಿ

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

ಚಾಮಾ೯ಡಿ: ರಸ್ತೆ ಹಾಗೂ ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟುಕೊಂಡು ಇದೀಗ ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸುವುದಾಗಿ ಮುಂದಾಗಿದ್ದಾರೆ.
ಚಾರ್ಮಾಡಿಯ ಮಸಣ ಗುಡ್ಡೆ, ಗಾಂದೀನಗರ ಪರಿಸರದಲ್ಲಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ, ಕುಡಿಯಲು ನೀರೂ ಇಲ್ಲವಾಗಿದೆ. ಈ ಬಗ್ಗೆ ಹಲವಾರು ಬಾರಿ ಜನಪ್ರತಿನಿಧಿಗಳ ಗಮನ ಸೆಳೆದರೂ ಇನ್ನೂ ರಸ್ತೆ ದುರಸ್ತಿಯಾಗಿಲ್ಲ, ನೀರಿನ ವ್ಯವಸ್ಥೆಯನ್ನು ಸರಿಪಡಿಸಲಾಗಿಲ್ಲ, ಈ ಬಗ್ಗೆ ಭರವಸೆಗಳನ್ನು ಕೇಳಿ ಸಾಕಾಗಿದೆ ಆದ್ದರಿಂದ ಈ ಬಾರಿಯ ಚಿನಾವಣೆಯಲ್ಲಿ ಮತದಾನದಲ್ಲಿ ಭಾಗವಹಿಸುವುದಿಲ್ಲ ಎಂದು ಈ ಪ್ರದೇಶದ ಜನರು ಪ್ರಕಟಿಸಿದ್ದಾರೆ. ನಮಗೆ ರಸ್ತೆ ಮತ್ತು ನೀರಿನ ವ್ಯವಸ್ಥೆಯನ್ನು ಮಾಡಿಕೊಟ್ಟರೆ ಮಾತ್ರ ರಾಜಕಾರಣಿಗಳು ಮತ ಕೇಳಲು ಇಲ್ಲಿಗೆ ಬಂದರೆ ಸಾಕು ಎಂಬುದು ಇಲ್ಲಿನ ಜನರ

ಒತ್ತಾಯವಾಗಿದೆ. ಈ ಪ್ರದೇಶದಲ್ಲಿ ಸುಮಾರು 100ರಷ್ಟು ಮನೆಗಳಿವೆ ಪ್ರತಿಬೇಸಗೆಯಲ್ಲಿಯೂ ಕುಡಿಯುವ ನೀರಿಗಾಗಿ ಪರದಾಡಬೇಕಾದ ಸ್ಥಿತಿ ಇಲ್ಲಿನ ನಿವಾಸಿಗಳದ್ದಾಗಿದೆ.ಜನರು ತಾವು ಚುನಾವಣಾ ಬಹಿಷ್ಕಾರ ಮಾಡುವುದಾಗಿ ಪ್ರಕಟಿಸಿದ್ದು ರಾಜಕೀಯ ಮುಖಂಡರುಗಳು ಇದಕ್ಕೆ ಯಾವ ರೀತಿ ಸ್ಪಂದಿಸುವರು ಕಾದು ನೋಡಬೇಕಾಗಿದೆ

Related posts

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘ಆಳ್ವಾಸ್ ಪ್ರಗತಿ ಉದ್ಘಾಟನೆ

Suddi Udaya

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya

ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಕುಂಭ ಕಾರ್ನಿವಾಲ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಗಾಳಿ ಮಳೆಗೆ 44 ವಿದ್ಯುತ್ ಕಂಬ ಧರಾಶಾಯಿ: ಅಪಾರ ಹಾನಿ

Suddi Udaya

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!