23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿ

ಕಕ್ಕಿಂಜೆಯ ಜೆ.ಕೆ ಎಲೆಕ್ಟ್ರಿಕಲ್ಸ್‌ ಮತ್ತು ವೈಂಡಸಸ್‌೯ ಅಂಗಡಿಯಿಂದ
ರೂ.94 ಸಾವಿರ ಮೌಲ್ಯದ 20 ಕೆ.ಜಿ ಸ್ಕ್ರಾಪ್‌ ಮತ್ತು ದುರಸ್ತಿಗೆ ಬಂದ ಪಂಪುಗಳ ಕಳವು


ಕಕ್ಕಿಂಜೆ: ಚಿಬಿದ್ರೆಯ ಜೆ.ಕೆ ಎಲೆಕ್ಟ್ರಿಕಲ್ಸ್‌ ಮತ್ತು ವೈಂಡಸ್‌೯ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು ಅಂಗಡಿಯೊಳಗಿದ್ದ ಕಾಫರ್‌ ವೇರ್‌(ಸ್ಕ್ರಾಪ್‌) ಹಾಗೂ ಬೋರ್‌ವೆಲ್‌ ಸಬ್‌ ಮಸಿ೯ಬಲ್‌ ಮತ್ತು ಮಸಿ೯ಬಲ್‌ ಮೋಟಾರ್‌ ಸೇರಿದಂತೆ ಸುಮಾಋು 94 ಸಾವಿರ ಮೌಲ್ಯದ ಸೊತ್ತುಗಳನ್ನು ಕಳವು ಗೈದ ಘಟನೆ ಮಾ.12ರಂದು ವರದಿಯಾಗಿದೆ.
ತೋಟತ್ತಾಡಿ ಗ್ರಾಮದ ಡೊಂಬರಮಜಲು ಮನೆ ನಿವಾಸಿ ಜಯಾನಂದ ಡಿ. ಪೂಜಾರಿ ಅವರ ಮಾಲಕತ್ವದ ಜಿ.ಕೆ ಅಂಗಡಿಯಿಂದ ಈ ಸೊತ್ತುಗಳನ್ನು ಕಳವುಗೈಯ್ಯಲಾಗಿದೆ. ಅವರು ಚಿಬಿದ್ರೆಯಲ್ಲಿ ಜೆ.ಕೆ ಎಲೆಕ್ಟ್ರಿಕ್‌ಲ್ಸ್‌ ಮತ್ತು ವೈಂಡರ್ಸ್‌ ಅಂಗಡಿ ಹೊಂದಿದ್ದು, ಮಾ.11 ರಂದು ರಾತ್ರಿ 11 ಗಂಟೆಯವರೆಗೆ ಕೆಲಸ ಮಾಡಿ, ಅಂಗಡಿಗೆ ಬೀಗ ಹಾಕಿ ಮನೆಗೆ ಬಂದಿದ್ದರು. ಮರುದಿನ ಮಾ.12 ರಂದು ಬೆಳಿಗ್ಗೆ ಅಂಗಡಿಗೆ ಬಂದು ನೋಡಿದಾಗ ಯಾರೋ ಕಳ್ಳರು ಅವರ ಅಂಗಡಿಗೆ ಹಾಕಿದ್ದ ಬೀಗವನ್ನು ಮುರಿದು ಒಳಪ್ರವೇಶಿಸಿ ಅಂಗಡಿಯಲ್ಲಿದ್ದ Coper wire(ಸ್ಕ್ರಾಪ್‌ ) 20 ಕೆ. ಜಿ ಮತ್ತು ರಿಪೇರಿಗೆ ತಂದಿದ್ದ ಬೋರ್‌ವೆಲ್‌ನ ಸಬ್‌ಮರ್ಸಿಬಲ್‌ ಮೋಟಾರ್‌ಗಳು (6/5 HP) 11 ಹಾಗೂ ಸಿಂಗಲ್‌ ಪೇಸ್‌ 2HP ಮರ್ಸಿಬಲ್‌ 2 ಮೋಟಾರ್‌ಗಳನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿತ್ತು. ಕಳವಾದ ಸೊತ್ತುಗಳ ಮೌಲ್ಯ ರೂ 94 ಸಾವಿರ ಎಂದು ಅಂದಾಜಿಸಲಾಗಿದೆ. ಜಯಾನಂದ ಅವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್‌ ಠಾಣೆ 15/2023 ಕಲಂ: 457,380 ಐ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಉಜಿರೆಯಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರ ಮೇಲೆ ಹಲ್ಲೆ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ಹಲವು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ ಶಾಲಾ ಬಳಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿ ಓಡುತ್ತಿದ್ದ ಓರ್ವ ರಸ್ತೆಗೆ ಬಿದ್ದು ಗಾಯ: ಇಬ್ಬರು ಆರೋಪಿಗಳ ಬಂಧನ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ಕುಪ್ಪೆ ಟ್ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

Suddi Udaya

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

Suddi Udaya
error: Content is protected !!