25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಪ್ರದೀಶ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ 2020ನೇ ಸಾಲಿನ ಪ್ರತಿಷ್ಠಿತ ‘ಮೈಸೂರು ದಿಗಂತ’ ಪ್ರಶಸ್ತಿಯನ್ನು ಮಂಗಳೂರಿನ ಪ್ರಜಾವಾಣಿ ಪತ್ರಕರ್ತ ಪ್ರದೀಶ್ ಮರೋಡಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ಪ್ರದಾನ ಮಾಡಿದರು.

ಕಂದಾಯ ಸಚಿವರಾದ ಆರ್.ಅಶೋಕ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಕೆ.ಸದಾಶಿವ ಶೆಣೈ, ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್. ರಂಗನಾಥ್, ವಿಆರ್ ಎಲ್ ಸಮೂಹದ ಮುಖ್ಯಸ್ಥ ವಿಜಯ ಸಂಕೇಶ್ವರ, ಅಕಾಡಿಮಿ ಸದಸ್ಯರು, ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಮಾಧ್ಯಮ ಅಕಾಡೆಮಿಯಲ್ಲಿ ಮೈಸೂರು ದಿಗಂತ ಪತ್ರಿಕೆ ಸ್ಥಾಪಿಸಿರುವ ‘ಮೈಸೂರು ದಿಗಂತ’ ದತ್ತಿ ಪ್ರಶಸ್ತಿಯು ₹ 10,000 ನಗದು ಬಹುಮಾನ, ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ಕರ್ನಾಟಕ ಮಾಧ್ಯಮ ಅಕಾಡೆಮಿಯು ಅತ್ಯುತ್ತಮ ಮಾನವೀಯ ಸಮಸ್ಯೆಯ ಲೇಖನಕ್ಕೆ ನೀಡಲಾಗುವ 2020ನೇ ಸಾಲಿನ ‘ಮೈಸೂರು ದಿಗಂತ’ ದತ್ತಿ ಪ್ರಶಸ್ತಿಗೆ ಪ್ರಜಾವಾಣಿಯಲ್ಲಿ ಪ್ರಕಟವಾದ ಪ್ರದೀಶ್ ಮರೋಡಿ ಅವರು ಬರೆದ ‘ಕೇಳುತ್ತಿಲ್ಲ ಮಲೆ ಮಕ್ಕಳ ಅಳಲು’ ವಿಶೇಷ ವರದಿಯು ಆಯ್ಕೆಯಾಗಿತ್ತು.

ಮಾಧ್ಯಮ ಕ್ಷೇತ್ರದಲ್ಲಿ ಒಂದೂವರೆ ದಶಕದಿಂದ ಕರ್ತವ್ಯ ನಿರ್ವಹಿಸುತ್ತಿರುವ ಪ್ರದೀಶ್‌ ಮರೋಡಿ ಅವರು ಬೆಳ್ತಂಗಡಿಯ ಸುದ್ದಿಬಿಡುಗಡೆ ವರದಿಗಾರರಾಗಿ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಕೆಲ ವರ್ಷ ಟಿವಿ ಮಾಧ್ಯಮದಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2013ರಿಂದ ಪ್ರಜಾವಾಣಿ ಪತ್ರಿಕೆಯಲ್ಲಿ ಮೈಸೂರಿನಲ್ಲಿ, ಪ್ರಸ್ತುತ ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ 2020ನೇ ಸಾಲಿನ ಪ್ರತಿಷ್ಠಿತ ‘ಪ.ಗೋ. ಪ್ರಶಸ್ತಿ’ಗೂ ಭಾಜನರಾಗಿದ್ದರು.

ಬಿಎಡ್, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಎಂ.ಎ. ಪದವೀಧರರಾಗಿರುವ ಅವರಿಗೆ ಪತ್ನಿ ಸಂಪ್ರಿಯ ಪ್ರದೀಶ್, ಪುತ್ರ ಅಗಸ್ತ್ಯ ಪ್ರದೀಶ್ ಇದ್ದಾರೆ.

Related posts

ಕನ್ಯಾಡಿ I : ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

Suddi Udaya

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya

ಭಾರತೀಯ ಶಿಕ್ಷಣ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಗುರುವಾಯನಕೆರೆ ವರ್ತಕರು

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

Suddi Udaya

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!