27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

ಚಾಮಾ೯ಡಿ: ರಸ್ತೆ ಹಾಗೂ ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟುಕೊಂಡು ಇದೀಗ ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸುವುದಾಗಿ ಮುಂದಾಗಿದ್ದಾರೆ.
ಚಾರ್ಮಾಡಿಯ ಮಸಣ ಗುಡ್ಡೆ, ಗಾಂದೀನಗರ ಪರಿಸರದಲ್ಲಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ, ಕುಡಿಯಲು ನೀರೂ ಇಲ್ಲವಾಗಿದೆ. ಈ ಬಗ್ಗೆ ಹಲವಾರು ಬಾರಿ ಜನಪ್ರತಿನಿಧಿಗಳ ಗಮನ ಸೆಳೆದರೂ ಇನ್ನೂ ರಸ್ತೆ ದುರಸ್ತಿಯಾಗಿಲ್ಲ, ನೀರಿನ ವ್ಯವಸ್ಥೆಯನ್ನು ಸರಿಪಡಿಸಲಾಗಿಲ್ಲ, ಈ ಬಗ್ಗೆ ಭರವಸೆಗಳನ್ನು ಕೇಳಿ ಸಾಕಾಗಿದೆ ಆದ್ದರಿಂದ ಈ ಬಾರಿಯ ಚಿನಾವಣೆಯಲ್ಲಿ ಮತದಾನದಲ್ಲಿ ಭಾಗವಹಿಸುವುದಿಲ್ಲ ಎಂದು ಈ ಪ್ರದೇಶದ ಜನರು ಪ್ರಕಟಿಸಿದ್ದಾರೆ. ನಮಗೆ ರಸ್ತೆ ಮತ್ತು ನೀರಿನ ವ್ಯವಸ್ಥೆಯನ್ನು ಮಾಡಿಕೊಟ್ಟರೆ ಮಾತ್ರ ರಾಜಕಾರಣಿಗಳು ಮತ ಕೇಳಲು ಇಲ್ಲಿಗೆ ಬಂದರೆ ಸಾಕು ಎಂಬುದು ಇಲ್ಲಿನ ಜನರ

ಒತ್ತಾಯವಾಗಿದೆ. ಈ ಪ್ರದೇಶದಲ್ಲಿ ಸುಮಾರು 100ರಷ್ಟು ಮನೆಗಳಿವೆ ಪ್ರತಿಬೇಸಗೆಯಲ್ಲಿಯೂ ಕುಡಿಯುವ ನೀರಿಗಾಗಿ ಪರದಾಡಬೇಕಾದ ಸ್ಥಿತಿ ಇಲ್ಲಿನ ನಿವಾಸಿಗಳದ್ದಾಗಿದೆ.ಜನರು ತಾವು ಚುನಾವಣಾ ಬಹಿಷ್ಕಾರ ಮಾಡುವುದಾಗಿ ಪ್ರಕಟಿಸಿದ್ದು ರಾಜಕೀಯ ಮುಖಂಡರುಗಳು ಇದಕ್ಕೆ ಯಾವ ರೀತಿ ಸ್ಪಂದಿಸುವರು ಕಾದು ನೋಡಬೇಕಾಗಿದೆ

Related posts

ಕುಕ್ಕೇಡಿ ನೂತನ ಶಾಲಾಭಿವೃದ್ದಿ ಸಮಿತಿ ರಚನೆ ಅಧ್ಯಕ್ಷರಾಗಿ ಕೃಷ್ಣಪ್ಪ, ಉಪಾಧ್ಯಕ್ಷರಾಗಿ ವೇದಾವತಿ ಆಯ್ಕೆ

Suddi Udaya

ನಿಟ್ಟಡೆ: ಕುಂಭಶ್ರೀ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ಸಂಕಲ್ಪ-2025’ ಓರಿಯಂಟೇಶನ್

Suddi Udaya

ಚಿತ್ರಕಲಾ ಪರೀಕ್ಷೆ: ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಅರಸಿನಮಕ್ಕಿ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನಕ್ಕೆ ಶೀರೂರು ವೇದವರ್ಧನ ಸ್ವಾಮೀಜಿಯವರು ಭೇಟಿ,

Suddi Udaya

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

Suddi Udaya

ಕೊಕ್ರಾಡಿಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya
error: Content is protected !!