23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

ಚಾಮಾ೯ಡಿ: ರಸ್ತೆ ಹಾಗೂ ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟುಕೊಂಡು ಇದೀಗ ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸುವುದಾಗಿ ಮುಂದಾಗಿದ್ದಾರೆ.
ಚಾರ್ಮಾಡಿಯ ಮಸಣ ಗುಡ್ಡೆ, ಗಾಂದೀನಗರ ಪರಿಸರದಲ್ಲಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ, ಕುಡಿಯಲು ನೀರೂ ಇಲ್ಲವಾಗಿದೆ. ಈ ಬಗ್ಗೆ ಹಲವಾರು ಬಾರಿ ಜನಪ್ರತಿನಿಧಿಗಳ ಗಮನ ಸೆಳೆದರೂ ಇನ್ನೂ ರಸ್ತೆ ದುರಸ್ತಿಯಾಗಿಲ್ಲ, ನೀರಿನ ವ್ಯವಸ್ಥೆಯನ್ನು ಸರಿಪಡಿಸಲಾಗಿಲ್ಲ, ಈ ಬಗ್ಗೆ ಭರವಸೆಗಳನ್ನು ಕೇಳಿ ಸಾಕಾಗಿದೆ ಆದ್ದರಿಂದ ಈ ಬಾರಿಯ ಚಿನಾವಣೆಯಲ್ಲಿ ಮತದಾನದಲ್ಲಿ ಭಾಗವಹಿಸುವುದಿಲ್ಲ ಎಂದು ಈ ಪ್ರದೇಶದ ಜನರು ಪ್ರಕಟಿಸಿದ್ದಾರೆ. ನಮಗೆ ರಸ್ತೆ ಮತ್ತು ನೀರಿನ ವ್ಯವಸ್ಥೆಯನ್ನು ಮಾಡಿಕೊಟ್ಟರೆ ಮಾತ್ರ ರಾಜಕಾರಣಿಗಳು ಮತ ಕೇಳಲು ಇಲ್ಲಿಗೆ ಬಂದರೆ ಸಾಕು ಎಂಬುದು ಇಲ್ಲಿನ ಜನರ

ಒತ್ತಾಯವಾಗಿದೆ. ಈ ಪ್ರದೇಶದಲ್ಲಿ ಸುಮಾರು 100ರಷ್ಟು ಮನೆಗಳಿವೆ ಪ್ರತಿಬೇಸಗೆಯಲ್ಲಿಯೂ ಕುಡಿಯುವ ನೀರಿಗಾಗಿ ಪರದಾಡಬೇಕಾದ ಸ್ಥಿತಿ ಇಲ್ಲಿನ ನಿವಾಸಿಗಳದ್ದಾಗಿದೆ.ಜನರು ತಾವು ಚುನಾವಣಾ ಬಹಿಷ್ಕಾರ ಮಾಡುವುದಾಗಿ ಪ್ರಕಟಿಸಿದ್ದು ರಾಜಕೀಯ ಮುಖಂಡರುಗಳು ಇದಕ್ಕೆ ಯಾವ ರೀತಿ ಸ್ಪಂದಿಸುವರು ಕಾದು ನೋಡಬೇಕಾಗಿದೆ

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಎಮ್.ಆರ್.ಪಿ.ಎಲ್ – ಸಿಎಸ್ಆರ್ ಯೋಜನೆಯಡಿ “ಶ್ರೀ ಕೃಷ್ಣ ಯೋಗಕ್ಷೇಮ” ಅಂಬುಲೆನ್ಸ್ ಹಸ್ತಾಂತರ

Suddi Udaya

ಕುಣಿತ ಭಜನಾ ತರಬೇತುದಾರರಾದ ವಿ ಹರೀಶ್ ನೆರಿಯ ರವರಿಗೆ ಗೌರವದ ಸನ್ಮಾನ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ಮ್ಯಾನೇಜ್ಮೆಂಟ್ ಫೆಸ್ಟ್ “

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya

ಪಿಯುಸಿ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ವರ್ಷ ಅವರಿಗೆ ಶೇ 96.66 ಫಲಿತಾಂಶ

Suddi Udaya
error: Content is protected !!