22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

ಚಾಮಾ೯ಡಿ: ರಸ್ತೆ ಹಾಗೂ ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟುಕೊಂಡು ಇದೀಗ ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸುವುದಾಗಿ ಮುಂದಾಗಿದ್ದಾರೆ.
ಚಾರ್ಮಾಡಿಯ ಮಸಣ ಗುಡ್ಡೆ, ಗಾಂದೀನಗರ ಪರಿಸರದಲ್ಲಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ, ಕುಡಿಯಲು ನೀರೂ ಇಲ್ಲವಾಗಿದೆ. ಈ ಬಗ್ಗೆ ಹಲವಾರು ಬಾರಿ ಜನಪ್ರತಿನಿಧಿಗಳ ಗಮನ ಸೆಳೆದರೂ ಇನ್ನೂ ರಸ್ತೆ ದುರಸ್ತಿಯಾಗಿಲ್ಲ, ನೀರಿನ ವ್ಯವಸ್ಥೆಯನ್ನು ಸರಿಪಡಿಸಲಾಗಿಲ್ಲ, ಈ ಬಗ್ಗೆ ಭರವಸೆಗಳನ್ನು ಕೇಳಿ ಸಾಕಾಗಿದೆ ಆದ್ದರಿಂದ ಈ ಬಾರಿಯ ಚಿನಾವಣೆಯಲ್ಲಿ ಮತದಾನದಲ್ಲಿ ಭಾಗವಹಿಸುವುದಿಲ್ಲ ಎಂದು ಈ ಪ್ರದೇಶದ ಜನರು ಪ್ರಕಟಿಸಿದ್ದಾರೆ. ನಮಗೆ ರಸ್ತೆ ಮತ್ತು ನೀರಿನ ವ್ಯವಸ್ಥೆಯನ್ನು ಮಾಡಿಕೊಟ್ಟರೆ ಮಾತ್ರ ರಾಜಕಾರಣಿಗಳು ಮತ ಕೇಳಲು ಇಲ್ಲಿಗೆ ಬಂದರೆ ಸಾಕು ಎಂಬುದು ಇಲ್ಲಿನ ಜನರ

ಒತ್ತಾಯವಾಗಿದೆ. ಈ ಪ್ರದೇಶದಲ್ಲಿ ಸುಮಾರು 100ರಷ್ಟು ಮನೆಗಳಿವೆ ಪ್ರತಿಬೇಸಗೆಯಲ್ಲಿಯೂ ಕುಡಿಯುವ ನೀರಿಗಾಗಿ ಪರದಾಡಬೇಕಾದ ಸ್ಥಿತಿ ಇಲ್ಲಿನ ನಿವಾಸಿಗಳದ್ದಾಗಿದೆ.ಜನರು ತಾವು ಚುನಾವಣಾ ಬಹಿಷ್ಕಾರ ಮಾಡುವುದಾಗಿ ಪ್ರಕಟಿಸಿದ್ದು ರಾಜಕೀಯ ಮುಖಂಡರುಗಳು ಇದಕ್ಕೆ ಯಾವ ರೀತಿ ಸ್ಪಂದಿಸುವರು ಕಾದು ನೋಡಬೇಕಾಗಿದೆ

Related posts

ಅಳದಂಗಡಿ ಸರಸ್ವತಿ ಭಟ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ವ್ಯಕ್ತಿತ್ವ ವಿಕಸನದ ಕಾರ್ಯಾಗಾರ

Suddi Udaya

ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸಮಾಜ ಸೇವಕ ಕೇಶವ ಫಡಕೆಯವರಿಗೆ ಗೌರವಾರ್ಪಣೆ

Suddi Udaya

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಅಂಡಿಂಜೆ: ಅಕ್ರಮ ಮರಳು ಸಾಗಾಟ : ರೂ.7 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಕೇಂದ್ರ ಕಛೇರಿಗೆ ಅಂತಾರಾಷ್ಟ್ರೀಯ ಕಬ್ಬಡ್ಡಿ ತರಬೇತುದಾರ ರವೀಂದ್ರ ಶೆಟ್ಟಿ ಭೇಟಿ

Suddi Udaya
error: Content is protected !!