25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಕಕ್ಕಿಂಜೆಯ ಜೆ.ಕೆ ಎಲೆಕ್ಟ್ರಿಕಲ್ಸ್‌ ಮತ್ತು ವೈಂಡಸಸ್‌೯ ಅಂಗಡಿಯಿಂದ
ರೂ.94 ಸಾವಿರ ಮೌಲ್ಯದ 20 ಕೆ.ಜಿ ಸ್ಕ್ರಾಪ್‌ ಮತ್ತು ದುರಸ್ತಿಗೆ ಬಂದ ಪಂಪುಗಳ ಕಳವು


ಕಕ್ಕಿಂಜೆ: ಚಿಬಿದ್ರೆಯ ಜೆ.ಕೆ ಎಲೆಕ್ಟ್ರಿಕಲ್ಸ್‌ ಮತ್ತು ವೈಂಡಸ್‌೯ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು ಅಂಗಡಿಯೊಳಗಿದ್ದ ಕಾಫರ್‌ ವೇರ್‌(ಸ್ಕ್ರಾಪ್‌) ಹಾಗೂ ಬೋರ್‌ವೆಲ್‌ ಸಬ್‌ ಮಸಿ೯ಬಲ್‌ ಮತ್ತು ಮಸಿ೯ಬಲ್‌ ಮೋಟಾರ್‌ ಸೇರಿದಂತೆ ಸುಮಾಋು 94 ಸಾವಿರ ಮೌಲ್ಯದ ಸೊತ್ತುಗಳನ್ನು ಕಳವು ಗೈದ ಘಟನೆ ಮಾ.12ರಂದು ವರದಿಯಾಗಿದೆ.
ತೋಟತ್ತಾಡಿ ಗ್ರಾಮದ ಡೊಂಬರಮಜಲು ಮನೆ ನಿವಾಸಿ ಜಯಾನಂದ ಡಿ. ಪೂಜಾರಿ ಅವರ ಮಾಲಕತ್ವದ ಜಿ.ಕೆ ಅಂಗಡಿಯಿಂದ ಈ ಸೊತ್ತುಗಳನ್ನು ಕಳವುಗೈಯ್ಯಲಾಗಿದೆ. ಅವರು ಚಿಬಿದ್ರೆಯಲ್ಲಿ ಜೆ.ಕೆ ಎಲೆಕ್ಟ್ರಿಕ್‌ಲ್ಸ್‌ ಮತ್ತು ವೈಂಡರ್ಸ್‌ ಅಂಗಡಿ ಹೊಂದಿದ್ದು, ಮಾ.11 ರಂದು ರಾತ್ರಿ 11 ಗಂಟೆಯವರೆಗೆ ಕೆಲಸ ಮಾಡಿ, ಅಂಗಡಿಗೆ ಬೀಗ ಹಾಕಿ ಮನೆಗೆ ಬಂದಿದ್ದರು. ಮರುದಿನ ಮಾ.12 ರಂದು ಬೆಳಿಗ್ಗೆ ಅಂಗಡಿಗೆ ಬಂದು ನೋಡಿದಾಗ ಯಾರೋ ಕಳ್ಳರು ಅವರ ಅಂಗಡಿಗೆ ಹಾಕಿದ್ದ ಬೀಗವನ್ನು ಮುರಿದು ಒಳಪ್ರವೇಶಿಸಿ ಅಂಗಡಿಯಲ್ಲಿದ್ದ Coper wire(ಸ್ಕ್ರಾಪ್‌ ) 20 ಕೆ. ಜಿ ಮತ್ತು ರಿಪೇರಿಗೆ ತಂದಿದ್ದ ಬೋರ್‌ವೆಲ್‌ನ ಸಬ್‌ಮರ್ಸಿಬಲ್‌ ಮೋಟಾರ್‌ಗಳು (6/5 HP) 11 ಹಾಗೂ ಸಿಂಗಲ್‌ ಪೇಸ್‌ 2HP ಮರ್ಸಿಬಲ್‌ 2 ಮೋಟಾರ್‌ಗಳನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿತ್ತು. ಕಳವಾದ ಸೊತ್ತುಗಳ ಮೌಲ್ಯ ರೂ 94 ಸಾವಿರ ಎಂದು ಅಂದಾಜಿಸಲಾಗಿದೆ. ಜಯಾನಂದ ಅವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್‌ ಠಾಣೆ 15/2023 ಕಲಂ: 457,380 ಐ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಕಂಬಳ ನಿರೂಪಕರಿಂದ ಛಾಯಾಗ್ರಾಹಕ ವೃತ್ತಿಯ ಬಗ್ಗೆ ಆಕ್ಷೇಪಾರ್ಹ ಮಾತು: ಛಾಯಾಗ್ರಾಹಕರ ಆಕ್ರೋಶ ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿಯವರಿಗೆ ದೂರು

Suddi Udaya

ಪತಿಯ ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ-ಪತಿ ಅಂಧರ್

Suddi Udaya

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಬಯಲು ; ಬೆಳ್ತಂಗಡಿ ಪೊಲೀಸರಿಂದ ದಾಳಿ: ಪ್ರಕರಣ ದಾಖಲು

Suddi Udaya

ಕೊಕ್ಕಡ: ಅಕ್ರಮ ಗೋಮಾಂಸ ಮಾಡುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ: ಆರೋಪಿ ಪರಾರಿ

Suddi Udaya
error: Content is protected !!