23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮುಂಡಾಜೆಯಲ್ಲಿ ಕೂಲಿ ಕೆಲಸಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು

ಮುಂಡಾಜೆ : ಕೂಲಿ ಕೆಲಸಕ್ಕೆಂದು ಹೋದ ಮಹಿಳೆಯೋವ೯ರು ಕುಸಿದು ಬಿದ್ದು, ಪ್ರಜ್ಞೆ ತಪ್ಪಿದವರನ್ನು ಕೂಡಲೇ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದ ದಾಖಲಿಸಿ, ಚಿಕಿತ್ಸೆ ನೀಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಾ.12ರಂದು ವರದಿಯಾಗಿದೆ.


ಮುಂಡಾಜೆ ಗ್ರಾಮದ ಸನ್ಯಾಸಿಕಟ್ಟೆ ನಿವಾಸಿ ಪಾವ೯ತಿ (55ವ) ಈ ದುಘ೯ಟನೆಯಲ್ಲಿ ಮೃತಪಟ್ಟವರಾಗಿದ್ದಾರೆ. ಅವರು ಮುಂಡಾಜೆ ಗ್ರಾಮದ ಸೊಮಂತ್ತಡ್ಕ ಗಣೇಶ ಎಂಬವರ ಮನೆಗೆ ಕೂಲಿ ಕೆಲಸಕ್ಕೆಂದು ಹೋಗುತ್ತೇನೆಂದು ಮನೆಯಲ್ಲಿ ಹೇಳಿ ಹೋಗಿದ್ದರು. ಅಲ್ಲಿ ಕೆಲಸ ಮಾಡುತ್ತಿರುವ ಸಮಯ ಸಂಜೆ ಒಮ್ಮೆಲೇ ಕುಸಿದು ಬಿದ್ದು, ಪ್ರಜ್ಞೆಯನ್ನು ಕಳೆದುಕೊಂಡರು. ಅವರನ್ನು ಆರೈಕೆ ಮಾಡಿ ಕೂಡಲೇ ಚಿಕಿತ್ಸೆಗೆ ಬಗ್ಗೆ ಕಕ್ಕಿಂಜೆ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದಿದ್ದುದರಿಂದ, ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿನ ವೈದ್ಯರ ಸಲಹೆಯಂತೆ ಕೂಡಲೇ ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ಚಿಕಿತ್ಸೆ ನೀಡಿದರೂ, ಫಲಕಾರಿಯಾಗದೇ ಅವರು ಆಸ್ಪತ್ರೆಯಲ್ಲಿ ಮೃತಪಟ್ಟರೆನ್ನಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪುತ್ರಿ ಪುಷ್ಪಾ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿ ವೇತನ

Suddi Udaya

ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ನವೀನ್ ಕುಮಾರ್ ಕೆ.ಎನ್. ನಿಧನ

Suddi Udaya

ಗೇರುಕಟ್ಟೆ : ಶ್ರೀನಿಧಿ ಮೆಡಿಕಲ್ ಶುಭಾರಂಭ

Suddi Udaya

ಕಾಯರ್ತಡ್ಕ: ಇತ್ತೀಚೆಗೆ ನಿಧನರಾದ ಕುಶಾಲಪ್ಪ ನಾಯ್ಕ ರವರ ಮನೆಗೆ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ

Suddi Udaya

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!