22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

ಚಾಮಾ೯ಡಿ: ರಸ್ತೆ ಹಾಗೂ ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟುಕೊಂಡು ಇದೀಗ ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸುವುದಾಗಿ ಮುಂದಾಗಿದ್ದಾರೆ.
ಚಾರ್ಮಾಡಿಯ ಮಸಣ ಗುಡ್ಡೆ, ಗಾಂದೀನಗರ ಪರಿಸರದಲ್ಲಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ, ಕುಡಿಯಲು ನೀರೂ ಇಲ್ಲವಾಗಿದೆ. ಈ ಬಗ್ಗೆ ಹಲವಾರು ಬಾರಿ ಜನಪ್ರತಿನಿಧಿಗಳ ಗಮನ ಸೆಳೆದರೂ ಇನ್ನೂ ರಸ್ತೆ ದುರಸ್ತಿಯಾಗಿಲ್ಲ, ನೀರಿನ ವ್ಯವಸ್ಥೆಯನ್ನು ಸರಿಪಡಿಸಲಾಗಿಲ್ಲ, ಈ ಬಗ್ಗೆ ಭರವಸೆಗಳನ್ನು ಕೇಳಿ ಸಾಕಾಗಿದೆ ಆದ್ದರಿಂದ ಈ ಬಾರಿಯ ಚಿನಾವಣೆಯಲ್ಲಿ ಮತದಾನದಲ್ಲಿ ಭಾಗವಹಿಸುವುದಿಲ್ಲ ಎಂದು ಈ ಪ್ರದೇಶದ ಜನರು ಪ್ರಕಟಿಸಿದ್ದಾರೆ. ನಮಗೆ ರಸ್ತೆ ಮತ್ತು ನೀರಿನ ವ್ಯವಸ್ಥೆಯನ್ನು ಮಾಡಿಕೊಟ್ಟರೆ ಮಾತ್ರ ರಾಜಕಾರಣಿಗಳು ಮತ ಕೇಳಲು ಇಲ್ಲಿಗೆ ಬಂದರೆ ಸಾಕು ಎಂಬುದು ಇಲ್ಲಿನ ಜನರ

ಒತ್ತಾಯವಾಗಿದೆ. ಈ ಪ್ರದೇಶದಲ್ಲಿ ಸುಮಾರು 100ರಷ್ಟು ಮನೆಗಳಿವೆ ಪ್ರತಿಬೇಸಗೆಯಲ್ಲಿಯೂ ಕುಡಿಯುವ ನೀರಿಗಾಗಿ ಪರದಾಡಬೇಕಾದ ಸ್ಥಿತಿ ಇಲ್ಲಿನ ನಿವಾಸಿಗಳದ್ದಾಗಿದೆ.ಜನರು ತಾವು ಚುನಾವಣಾ ಬಹಿಷ್ಕಾರ ಮಾಡುವುದಾಗಿ ಪ್ರಕಟಿಸಿದ್ದು ರಾಜಕೀಯ ಮುಖಂಡರುಗಳು ಇದಕ್ಕೆ ಯಾವ ರೀತಿ ಸ್ಪಂದಿಸುವರು ಕಾದು ನೋಡಬೇಕಾಗಿದೆ

Related posts

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

Suddi Udaya

ತಾಲೂಕಿನಾದ್ಯಂತ ಗಾಳಿ ಮಳೆ: ವಿವಿಧ ಕಡೆಗಳಲ್ಲಿ ಹಾನಿ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya

ಇಂದಬೆಟ್ಟು: ಬರೆಮೇಲು ನಿವಾಸಿ ಯಶೋಧ ಯಾನೆ ಮೋನಮ್ಮ ನಿಧನ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!