September 6, 2026
ಗ್ರಾಮಾಂತರ ಸುದ್ದಿ

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

ಚಾಮಾ೯ಡಿ: ರಸ್ತೆ ಹಾಗೂ ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟುಕೊಂಡು ಇದೀಗ ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸುವುದಾಗಿ ಮುಂದಾಗಿದ್ದಾರೆ.
ಚಾರ್ಮಾಡಿಯ ಮಸಣ ಗುಡ್ಡೆ, ಗಾಂದೀನಗರ ಪರಿಸರದಲ್ಲಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ, ಕುಡಿಯಲು ನೀರೂ ಇಲ್ಲವಾಗಿದೆ. ಈ ಬಗ್ಗೆ ಹಲವಾರು ಬಾರಿ ಜನಪ್ರತಿನಿಧಿಗಳ ಗಮನ ಸೆಳೆದರೂ ಇನ್ನೂ ರಸ್ತೆ ದುರಸ್ತಿಯಾಗಿಲ್ಲ, ನೀರಿನ ವ್ಯವಸ್ಥೆಯನ್ನು ಸರಿಪಡಿಸಲಾಗಿಲ್ಲ, ಈ ಬಗ್ಗೆ ಭರವಸೆಗಳನ್ನು ಕೇಳಿ ಸಾಕಾಗಿದೆ ಆದ್ದರಿಂದ ಈ ಬಾರಿಯ ಚಿನಾವಣೆಯಲ್ಲಿ ಮತದಾನದಲ್ಲಿ ಭಾಗವಹಿಸುವುದಿಲ್ಲ ಎಂದು ಈ ಪ್ರದೇಶದ ಜನರು ಪ್ರಕಟಿಸಿದ್ದಾರೆ. ನಮಗೆ ರಸ್ತೆ ಮತ್ತು ನೀರಿನ ವ್ಯವಸ್ಥೆಯನ್ನು ಮಾಡಿಕೊಟ್ಟರೆ ಮಾತ್ರ ರಾಜಕಾರಣಿಗಳು ಮತ ಕೇಳಲು ಇಲ್ಲಿಗೆ ಬಂದರೆ ಸಾಕು ಎಂಬುದು ಇಲ್ಲಿನ ಜನರ

ಒತ್ತಾಯವಾಗಿದೆ. ಈ ಪ್ರದೇಶದಲ್ಲಿ ಸುಮಾರು 100ರಷ್ಟು ಮನೆಗಳಿವೆ ಪ್ರತಿಬೇಸಗೆಯಲ್ಲಿಯೂ ಕುಡಿಯುವ ನೀರಿಗಾಗಿ ಪರದಾಡಬೇಕಾದ ಸ್ಥಿತಿ ಇಲ್ಲಿನ ನಿವಾಸಿಗಳದ್ದಾಗಿದೆ.ಜನರು ತಾವು ಚುನಾವಣಾ ಬಹಿಷ್ಕಾರ ಮಾಡುವುದಾಗಿ ಪ್ರಕಟಿಸಿದ್ದು ರಾಜಕೀಯ ಮುಖಂಡರುಗಳು ಇದಕ್ಕೆ ಯಾವ ರೀತಿ ಸ್ಪಂದಿಸುವರು ಕಾದು ನೋಡಬೇಕಾಗಿದೆ

Related posts

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ಅಜಯ್ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ವಿವಿಧ ಘಟಕಗಳಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya

ಶಿವಾಜಿ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಬಳೆಂಜ ಶಾಲೆಯಲ್ಲಿ ವಿಶಿಷ್ಟ ರಕ್ಷಾಬಂಧನ ಆಚರಣೆ

Suddi Udaya

ಶಿರ್ಲಾಲು: ವಿದ್ಯುತ್ ಅವಘಡದಿಂದ ಹಿತ್ತಿಲು ಪರಿಸರದಲ್ಲಿ ಬೆಂಕಿ

Suddi Udaya
error: Content is protected !!