23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

ಚಾಮಾ೯ಡಿ: ರಸ್ತೆ ಹಾಗೂ ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟುಕೊಂಡು ಇದೀಗ ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸುವುದಾಗಿ ಮುಂದಾಗಿದ್ದಾರೆ.
ಚಾರ್ಮಾಡಿಯ ಮಸಣ ಗುಡ್ಡೆ, ಗಾಂದೀನಗರ ಪರಿಸರದಲ್ಲಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ, ಕುಡಿಯಲು ನೀರೂ ಇಲ್ಲವಾಗಿದೆ. ಈ ಬಗ್ಗೆ ಹಲವಾರು ಬಾರಿ ಜನಪ್ರತಿನಿಧಿಗಳ ಗಮನ ಸೆಳೆದರೂ ಇನ್ನೂ ರಸ್ತೆ ದುರಸ್ತಿಯಾಗಿಲ್ಲ, ನೀರಿನ ವ್ಯವಸ್ಥೆಯನ್ನು ಸರಿಪಡಿಸಲಾಗಿಲ್ಲ, ಈ ಬಗ್ಗೆ ಭರವಸೆಗಳನ್ನು ಕೇಳಿ ಸಾಕಾಗಿದೆ ಆದ್ದರಿಂದ ಈ ಬಾರಿಯ ಚಿನಾವಣೆಯಲ್ಲಿ ಮತದಾನದಲ್ಲಿ ಭಾಗವಹಿಸುವುದಿಲ್ಲ ಎಂದು ಈ ಪ್ರದೇಶದ ಜನರು ಪ್ರಕಟಿಸಿದ್ದಾರೆ. ನಮಗೆ ರಸ್ತೆ ಮತ್ತು ನೀರಿನ ವ್ಯವಸ್ಥೆಯನ್ನು ಮಾಡಿಕೊಟ್ಟರೆ ಮಾತ್ರ ರಾಜಕಾರಣಿಗಳು ಮತ ಕೇಳಲು ಇಲ್ಲಿಗೆ ಬಂದರೆ ಸಾಕು ಎಂಬುದು ಇಲ್ಲಿನ ಜನರ

ಒತ್ತಾಯವಾಗಿದೆ. ಈ ಪ್ರದೇಶದಲ್ಲಿ ಸುಮಾರು 100ರಷ್ಟು ಮನೆಗಳಿವೆ ಪ್ರತಿಬೇಸಗೆಯಲ್ಲಿಯೂ ಕುಡಿಯುವ ನೀರಿಗಾಗಿ ಪರದಾಡಬೇಕಾದ ಸ್ಥಿತಿ ಇಲ್ಲಿನ ನಿವಾಸಿಗಳದ್ದಾಗಿದೆ.ಜನರು ತಾವು ಚುನಾವಣಾ ಬಹಿಷ್ಕಾರ ಮಾಡುವುದಾಗಿ ಪ್ರಕಟಿಸಿದ್ದು ರಾಜಕೀಯ ಮುಖಂಡರುಗಳು ಇದಕ್ಕೆ ಯಾವ ರೀತಿ ಸ್ಪಂದಿಸುವರು ಕಾದು ನೋಡಬೇಕಾಗಿದೆ

Related posts

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಗ್ರಾಮ‌ ಸಮಿತಿ ನೆರಿಯ ವತಿಯಿಂದ ಗೋಪೂಜೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಉಮಾ ಡಿ ಗೌಡ ಹಟ್ಟತ್ತೋಡಿ ರವರಿಗೆ “ಜಿಲ್ಲಾ ಮಟ್ಟದ ವಿದ್ಯಾರತ್ನ ಪ್ರಶಸ್ತಿ”

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ನೇಮಕ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ – 2024

Suddi Udaya

ಅಜ್ಮೀರ್ ಖಾಜಾ ಸಂಸ್ಮರಣೆ; ಸರ್ವಧರ್ಮೀಯ ಐದು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ

Suddi Udaya

ಡಿ 19 :ಉಜಿರೆ  ಗ್ರಾ.ಪಂ.ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!