25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

ಬೆಳ್ತಂಗಡಿ: ರಾಜ್ಯ ಸರಕಾರದ 2018 ನೇ ಸಾಲಿನ, ಪ್ರತಿಷ್ಠಿತ ಮೊಹರೆ ಹಣಮಂತರಾಯ ಪ್ರಶಸ್ತಿಗೆ ಆಯ್ಕೆಯಾಗಿರುವ ಸುದ್ದಿ ಬಿಡುಗಡೆ ಪ್ರಧಾನ ಸಂಪಾದಕ, ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರವರಿಗೆ ಮಾ.13ರಂದು ಪ್ರಶಸ್ತಿ ಪ್ರದಾನ ಮಾಡಲಾಯಿತು.


ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.ಕಂದಾಯ ಸಚಿವ ಆರ್.ಅಶೋಕ್,ಮಾಜಿ ಸಂಸದ ವಿಜಯ ಸಂಕೇಶ್ವರ, ಪಬ್ಲಿಕ್ ಟಿವಿಯ ಮುಖ್ಯಸ್ಥ ಹೆಚ್.ಆರ್.ರಂಗನಾಥ್, ವಾರ್ತಾ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಬೆಳ್ತಂಗಡಿ, ಪುತ್ತೂರು, ಸುಳ್ಯದಲ್ಲಿ ಸುದ್ದಿ ಬಿಡುಗಡೆ ಪತ್ರಿಕೆ ಮಾತ್ರವಲ್ಲದೆ ಮಾಹಿತಿ, ಸುದ್ದಿ ವೆಬ್‌ಸೈಟ್, ಸುದ್ದಿ ನ್ಯೂಸ್ ಚಾನೆಲ್ ಜೊತೆಗೆ ಬಲಾತ್ಕಾರದ ಬಂದ್, ಸಾಮಾಜಿಕ ಜಾಲತಾಣಗಳ ದುರುಪಯೋಗ, ಲಂಚ-ಭ್ರಷ್ಟಾಚಾರದ ವಿರುದ್ಧ ಜನಾಂದೋಲನಗಳ ಮೂಲಕ ಜನಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಿರುವ ಡಾ.ಯು.ಪಿ.ಶಿವಾನಂದ ಅವರು, ಕೊರೋನಾ ಸಂದರ್ಭದ ವಾರಾಂತ್ಯ ಕರ್ಪ್ಯೂ ವಿರುದ್ಧ ಜಾಗೃತಿ ಮೂಡಿಸುವಲ್ಲಿಯೂ ಯಶಸ್ವಿಯಾಗಿ ರಾಜ್ಯ ಮಟ್ಟದಲ್ಲಿ ಶ್ಲಾಘನೆಗೆ ಪಾತ್ರರಾಗಿದ್ದಾರೆ.ಇತ್ತೀಚೆಗಷ್ಟೆ ಪುತ್ತೂರುನಲ್ಲಿ ಸಸ್ಯ ಜಾತ್ರೆಯನ್ನು ಯಶಸ್ವಿಯಾಗಿ ಸಂಘಟಿಸಿದ್ದರು. ಶಿಕ್ಷಣ,ಉದ್ಯೋಗ ಮತ್ತು ಕೃಷಿ ಮಾಹಿತಿ ಕೇಂದ್ರವನ್ನು ಆರಂಭಿಸಿರುವುದು ಸೇರಿದಂತೆ ಹಲವು ಪ್ರಥಮಗಳಿಗೆ ನಾಂದಿ ಹಾಡಿರುವ ಡಾ.ಯು.ಪಿ.ಶಿವಾನಂದರವರು ಮಾಧ್ಯಮ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಗರ್ಡಾಡಿ : ಹಳ್ಳಿಂಜ ಬೀಡು ನಿವಾಸಿ ಭವಾನಿ ನಿಧನ

Suddi Udaya

ಪಟ್ರಮೆ: ಪಟ್ಟೂರು ಪಿತ್ತಿಲ್ತಾರು ನಿವಾಸಿ ಮೋನಪ್ಪ ಎಂ. ಕೆ ನಿಧನ

Suddi Udaya

ಮಾಜಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ರವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

Suddi Udaya

ಕಳೆಂಜ ಅರಣ್ಯ ಇಲಾಖೆ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆ ನಿರ್ಮಾಣ: ಅಕ್ರಮ ಪ್ರವೇಶ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ: 11 ಜನರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮುಂಡೂರು: ದುರ್ಗಾ ನಗರ ನಿವಾಸಿ ಕಾರ್ತಿಕ್ ಹೆಗ್ಡೆ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ವ್ಯಕ್ತಿತ್ವ ವಿಕಸನದ ಕಾರ್ಯಾಗಾರ

Suddi Udaya
error: Content is protected !!