23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಉಜಿರೆಯಲ್ಲಿ “ಖಿಯಾದ” ಎಸ್.ಎಸ್. ಎಫ್ ರಾಜ್ಯ ಪ್ರತಿನಿಧಿ ಸಮಾವೇಶ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್.ಎಸ್.ಎಫ್) ಇದರ ಗ್ರಾಂಡ್ ಪ್ರತಿನಿಧಿ ಸಮಾವೇಶ
ಮಾ. 18-19 ರಂದು ಕಾಶಿಬೆಟ್ಟು ಮಲ್‌ಜ‌ಅ ಕ್ಯಾಂಪಸ್ ನಲ್ಲಿ (ಉಜಿರೆ ಹಳೆಪೇಟೆ ಸಮೀಪ) ನಡೆಯಲಿದೆ ಎಂದು ಸಂಘಟನೆಯ ನಾಯಕರು ಮಾ. 15 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಯುನಿಟ್, ಸೆಕ್ಟರ್, ಡಿವಿಷನ್, ಜಿಲ್ಲೆಗಳಿಗೆ ನಾಯಕರಾಗಿ ಆಯ್ಕೆಯಾದ ಎರಡು ಸಾವಿರ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ರಾಜ್ಯ ಮತ್ತು ಹೊರರಾಜ್ಯದ ಖ್ಯಾತ ತರಬೇತುದಾರರಿಂದ ವಿಶೇಷ ತರಬೇತಿ ನಡೆಯಲಿದೆ. ಮುಂದಿನ ಎರಡು ವರ್ಷಕ್ಕೆ ಸಂಘಟನೆ ಕೈಗೊಳ್ಳಬೇಕಾದ ಕಾರ್ಯಚಟುವಟಿಕೆಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳ ತರಗತಿಗಳು ಈ ಸಮಾವೇಶದಲ್ಲಿ ನಡೆಯಲಿದೆ.
ರಾಜ್ಯ SSF ಇದರ ವಾರ್ಷಿಕ ಕೌನ್ಸಿಲ್ ಸಭೆ ಕೂಡ ನಡೆದು ರಾಜ್ಯ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ. ಮಾ.19 ರಂದು ಸಮಾರೋಪ ಸಮಾರಂಭದಲ್ಲಿ ನವ ನಾಯಕತ್ವದ ಘೋಷಣೆ ನಡೆಯಲಿದೆ.
ಎಸ್‌ಎಮ್‌ಎ ರಾಜ್ಯಾಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ತಂಙಳ್ ಧ್ವಜಾರೋಹಣ ನಡೆಸಲಿದ್ದಾರೆ. ಉದ್ಘಾಟನೆ ಯನ್ನು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯಾಧ್ಯಕ್ಷ ಡಾ.‌ ಕಾವಳಕಟ್ಟೆ ಹಝ್ರತ್ ನೆರವೇರಿಸಲಿದ್ದಾರೆ.
ಕರ್ನಾಟಕ ರಾಜ್ಯ ಉಲಮಾ ಒಕ್ಕೂಟದ ಅಧ್ಯಕ್ಷ, ಖಾಝಿ‌ ಮಾಣಿ ಉಸ್ತಾದ್ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ ಲೆತೀಫ್ ಸ‌ಅದಿ ಅಧ್ಯಕ್ಷತೆ ವಹಿಸಲಿದ್ದಾರೆ.

ತಾಲೂಕಿನ ಎಲ್ಲಾ ಸಯ್ಯಿದರುಗಳು, ಸುನ್ನೀ ಸಂಘ ಕುಟುಂಬದ ಸಂಘಟನೆಗಳಾದ ಕರ್ನಾಟಕ ಸುನ್ನೀ ವಿದ್ಯಾರ್ಥಿ ಸಂಘಟನೆ(SBS), ಸುನ್ನೀ ಯುವಜನ ಸಂಘ(SYS), ಕರ್ನಾಟಕ ಮುಸ್ಲಿಂ ಜಮಾಅತ್ ( KMJ), ಸುನ್ನೀ ಮೆನೇಜ್‌ಮೆಂಟ್ ಅಸೋಸಿಯೇಷನ್ ( SMA), ಸುನ್ನೀ ಜಂ ಇಯ್ಯತುಲ್ ಮುಅಲ್ಲಿಮೀನ್ ( SJM), ಸುನ್ನೀ ಜಂಇಯ್ಯತುಲ್ ಉಲಮಾ (SJU) ಮೊದಲಾದ ಸಂಘಟನೆಗಳ ನಾಯಕರುಗಳು ಭಾಗವಹಿಸಲಿದ್ದಾರೆ.

ಮಾ. 19 ರಂದು ಸಂಜೆ 4.00 ಕ್ಕೆ ಹಳೆಪೇಟೆಯಿಂದ ಉಜಿರೆ ಬೆಳಾಲು ತಿರುವು ರಸ್ತೆವರೆಗೆ ಕಾರ್ಯಕರ್ತರ ಕಾಲ್ನಡಿಗೆ ಜಾಥಾ ಏರ್ಪಡಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ “ಖಿಯಾದ” ರಾಜ್ಯ ಪ್ರತಿನಿಧಿ‌ ಅಮೀರ್ ಮುಸ್ತಫಾ ನ‌ಈಮಿ, ರಾಜ್ಯ ಆತಿಥೇಯ “ಖಿಯಾದ ಟೀಮ್ ಅನ್ಸಾರಿ”, ಸ್ವಾಗತ ಸಮಿತಿ ಚೇರ್ಮನ್ ಸಲೀಂ ಕನ್ಯಾಡಿ, ಕೋಶಾಧಿಕಾರಿ ಅಬೂಬಕ್ಕರ್ ಮಲೆಬೆಟ್ಟು, ಸಂಘಟಕರುಗಳಾದ ಸಾದಿಕ್ ಮಾಸ್ಟರ್ ಮಲೆಬೆಟ್ಟು, ಅಶ್ರಫ್ ಆಲಿಕುಂಞಿ ಮುಂಡಾಜೆ, ಎಂ.ಎ ಕಾಸಿಂ ಮುಸ್ಲಿಯಾರ್ ಮಾಚಾರು ಉಪಸ್ಥಿತರಿದ್ದರು.

Related posts

ಮುಂಡಾಜೆ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಲಯ ಭಜನಾ ಸಮಾವೇಶ

Suddi Udaya

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಅಕ್ಕಮ್ಮ ರವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ

Suddi Udaya

ಕೇರಳ ವಿಧಾನಸಭಾ ಚುನಾವಣೆ: ಪೀರಮೇಡು ಬ್ಲಾಕ್‌ ವೀಕ್ಷಕರಾಗಿ ಬ್ಲಾಕ್ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಎಂ,ಹೆಚ್ ಮೊಹಮ್ಮದ್ ಕಲಂದರ್ ಶಾ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆ, ನಾಲ್ಕೂರು ಎ.ಬಿ ಒಕ್ಕೂಟದ ಪದಗ್ರಹಣ ಸಮಾರಂಭ: ನವಜೀವನ ಸಮಿತಿ ಸದಸ್ಯರಿಗೆ ಹಾಗೂ ಹಿರಿಯ ಸದಸ್ಯರಿಗೆ ಸನ್ಮಾನ

Suddi Udaya

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ: ಕ್ಲಬ್ ವತಿಯಿಂದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya
error: Content is protected !!