23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಚಾರ್ಮಾಡಿ ಚೆಕ್ ಪೋಸ್ಟ್ ಬಿಗಿ ತಪಾಸಣೆಗೆ ಕ್ರಮ-ಜಿಲ್ಲೆಯಿಂದ ಹೊರ ಹೋಗುವ,ಜಿಲ್ಲೆಗೆ ಆಗಮಿಸುವ ವಾಹನಗಳ ಬಗ್ಗೆ ತೀವ್ರ ನಿಗಾ

ಬೆಳ್ತಂಗಡಿ: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ರಾಜ್ಯದ,ಜಿಲ್ಲೆಗಳ ಗಡಿ ಪ್ರದೇಶಗಳಲ್ಲಿರುವ ಚೆಕ್ ಪೋಸ್ಟ್ ಗಳಲ್ಲಿ ಬಿಗು ತಪಾಸಣೆ ಆರಂಭಿಸಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ
ಬೆಳ್ತಂಗಡಿ ಪೋಲೀಸ್ ವೃತ್ತ ನಿರೀಕ್ಷಕರ ಮಾರ್ಗದರ್ಶನದಲ್ಲಿ

ಧರ್ಮಸ್ಥಳ ಪಿ ಎಸ್ ಐ ಅನಿಲ್ ಕುಮಾರ್ ಅವರ ನಿರ್ದೇಶನದಂತೆ ತಪಾಸಣೆ ಆರಂಭಿಸಲಾಗಿದ್ದು ಜಿಲ್ಲೆಯಿಂದ ಹೊರ ಹೋಗುವ,ಜಿಲ್ಲೆಗೆ ಆಗಮಿಸುವ ವಾಹನಗಳ ಬಗ್ಗೆ ತೀವ್ರ ನಿಗಾ ವಹಿಸಲಾಗುತ್ತಿದೆ.
ದ.ಕ ಹಾಗೂ ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಚೆಕ್ ಪೋಸ್ಟ್ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತದೆ. ಚುನಾವಣೆ ಹಿನ್ನೆಲೆಯಲ್ಲಿ ಹಣ, ಶಸ್ತ್ರಾಸ್ತ್ರ,ಉಡುಗೊರೆ ಮದ್ಯ ಸಾಗಾಟ ಸಹಿತ ಅಹಿತಕರ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಈ ರಸ್ತೆಯಲ್ಲಿ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಎಲ್ಲಾ ವಾಹನಗಳನ್ನು ಈ ಚೆಕ್ ಪೋಸ್ಟ್ ನಲ್ಲಿ ತಪಾಸಣೆಗೊಳಪಡಿಸಲಾ
ಗುತ್ತದೆ ಎಂದು ತಿಳಿದುಬಂದಿದೆ.
ಫಲಕ ಅಳವಡಿಕೆ:


ಈ ಬಗ್ಗೆ ಚೆಕ್ ಪೋಸ್ಟ್ ನಲ್ಲಿ ಫಲಕ ಅಳವಡಿಸಿಲಾಗಿದ್ದು, ಪೊಲೀಸರಿಗೆ ಹೆಚ್ಚಿನ ಸೂಚನೆಗಳನ್ನು ನೀಡಲಾಗಿದೆ.
ಈಗ ಪ್ರತಿಪಾಳಿಯಲ್ಲಿ ಇಬ್ಬರು ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು ಮುಂದಿನ ದಿನಗಳಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸುವ ಕುರಿತು ಪಿಎಸ್ ಐ ಅನಿಲ್ ಕುಮಾರ್ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಆರಂಭ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಬಾಲ್ – ಬ್ಯಾಡ್ಮಿಂಟನ್ ಪಂದ್ಯಾಟ: ಕಾಯರ್ತಡ್ಕ ಸ.ಪ್ರೌ. ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ 33 ನೇ ಸಹಾಯಧನ ಹಸ್ತಾಂತರ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

Suddi Udaya

ಗುರವಾಯನಕೆರೆ: ವಿದ್ವತ್ ಕಾಲೇಜಿನಲ್ಲಿ ಆಂಗ್ಲ ಭಾಷೆ ಉಪನ್ಯಾಸಕರ ಕಾರ್ಯಾಗಾರ

Suddi Udaya
error: Content is protected !!