25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಚಾರ್ಮಾಡಿ ಚೆಕ್ ಪೋಸ್ಟ್ ಬಿಗಿ ತಪಾಸಣೆಗೆ ಕ್ರಮ-ಜಿಲ್ಲೆಯಿಂದ ಹೊರ ಹೋಗುವ,ಜಿಲ್ಲೆಗೆ ಆಗಮಿಸುವ ವಾಹನಗಳ ಬಗ್ಗೆ ತೀವ್ರ ನಿಗಾ

ಬೆಳ್ತಂಗಡಿ: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ರಾಜ್ಯದ,ಜಿಲ್ಲೆಗಳ ಗಡಿ ಪ್ರದೇಶಗಳಲ್ಲಿರುವ ಚೆಕ್ ಪೋಸ್ಟ್ ಗಳಲ್ಲಿ ಬಿಗು ತಪಾಸಣೆ ಆರಂಭಿಸಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ
ಬೆಳ್ತಂಗಡಿ ಪೋಲೀಸ್ ವೃತ್ತ ನಿರೀಕ್ಷಕರ ಮಾರ್ಗದರ್ಶನದಲ್ಲಿ

ಧರ್ಮಸ್ಥಳ ಪಿ ಎಸ್ ಐ ಅನಿಲ್ ಕುಮಾರ್ ಅವರ ನಿರ್ದೇಶನದಂತೆ ತಪಾಸಣೆ ಆರಂಭಿಸಲಾಗಿದ್ದು ಜಿಲ್ಲೆಯಿಂದ ಹೊರ ಹೋಗುವ,ಜಿಲ್ಲೆಗೆ ಆಗಮಿಸುವ ವಾಹನಗಳ ಬಗ್ಗೆ ತೀವ್ರ ನಿಗಾ ವಹಿಸಲಾಗುತ್ತಿದೆ.
ದ.ಕ ಹಾಗೂ ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಚೆಕ್ ಪೋಸ್ಟ್ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತದೆ. ಚುನಾವಣೆ ಹಿನ್ನೆಲೆಯಲ್ಲಿ ಹಣ, ಶಸ್ತ್ರಾಸ್ತ್ರ,ಉಡುಗೊರೆ ಮದ್ಯ ಸಾಗಾಟ ಸಹಿತ ಅಹಿತಕರ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಈ ರಸ್ತೆಯಲ್ಲಿ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಎಲ್ಲಾ ವಾಹನಗಳನ್ನು ಈ ಚೆಕ್ ಪೋಸ್ಟ್ ನಲ್ಲಿ ತಪಾಸಣೆಗೊಳಪಡಿಸಲಾ
ಗುತ್ತದೆ ಎಂದು ತಿಳಿದುಬಂದಿದೆ.
ಫಲಕ ಅಳವಡಿಕೆ:


ಈ ಬಗ್ಗೆ ಚೆಕ್ ಪೋಸ್ಟ್ ನಲ್ಲಿ ಫಲಕ ಅಳವಡಿಸಿಲಾಗಿದ್ದು, ಪೊಲೀಸರಿಗೆ ಹೆಚ್ಚಿನ ಸೂಚನೆಗಳನ್ನು ನೀಡಲಾಗಿದೆ.
ಈಗ ಪ್ರತಿಪಾಳಿಯಲ್ಲಿ ಇಬ್ಬರು ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು ಮುಂದಿನ ದಿನಗಳಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸುವ ಕುರಿತು ಪಿಎಸ್ ಐ ಅನಿಲ್ ಕುಮಾರ್ ತಿಳಿಸಿದ್ದಾರೆ.

Related posts

ಉಜಿರೆ ಅನುಗ್ರಹ ಆಂ.ಮಾ. ಶಾಲಾ ಪ್ರಾರಂಭೋತ್ಸವ

Suddi Udaya

ವಾಣಿ ಶಿಕ್ಷಣ ಸಂಸ್ಥೆಗೆ ಅಮೇರಿಕದ ಡಾ. ರಾಮಯ್ಯ ಗೌಡ, ಶ್ರೀಮತಿ ಕೋನಿ ದಂಪತಿ ಭೇಟಿ

Suddi Udaya

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಮಹಾ ಕುಂಭಮೇಳದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಣ್ಯಸ್ನಾನ

Suddi Udaya

ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!