24.7 C
ಪುತ್ತೂರು, ಬೆಳ್ತಂಗಡಿ
May 17, 2025
ರಾಜ್ಯ ಸುದ್ದಿ

5ನೇ ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ‌‌‌‌‌‌ಹೈಕೋರ್ಟ್ ನ ವಿಭಾಗೀಯಪೀಠ ಅನುಮತಿ

  • ಪಠ್ಯಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳವಂತಿಲ್ಲ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟಿಸುವಂತಿಲ್ಲ ಕೋರ್ಟು ಸೂಚನೆ

ಬೆಂಗಳೂರು: 5-8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ನ ವಿಭಾಗೀಯಪೀಠ ಅನುಮತಿ ನೀಡಿದೆ. 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.
10 ದಿನಗಳ ಬಳಿಕ ಅಂದರೆ ಮಾ.27 ರಿಂದ ಪರೀಕ್ಷೆ ನಡೆಸಲು ಹೈಕೋರ್ಟ್ ಸೂಚನೆ ನೀಡಿದ್ದು, ಪಠ್ಯಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳವಂತಿಲ್ಲ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟಿಸುವಂತಿಲ್ಲ. ಶಾಲೆಗೆ ಮಾತ್ರವೇ ಕಳಿಸಬೇಕು ಎಂದು ಹೈಕೋರ್ಟ್‌ ಸೂಚನೆ ನೀಡಿದೆ.

5-8 ನೇ ತರಗತಿ ಪರೀಕ್ಷೆ ನಡೆಸಲು ಶಿಕ್ಷಣ ಕಾಯ್ದೆಯಡಿ ನಿರ್ಬಂಧವಿಲ್ಲ ಆದ್ದರಿಂದ ಪರೀಕ್ಷೆ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠ ರದ್ದುಗೊಳಿಸಿದ್ದು ಪರೀಕ್ಷೆ ನಡೆಸಬಹುದೆಂದು ಆದೇಶ ನೀಡಿದೆ.

Related posts

ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆ ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

500 ಮತ್ತು 1000 ಮುಖಬೆಲೆ ನೋಟು ಅಮಾನೀಕರಣ: ಕೇಂದ್ರ ಸರ್ಕಾರದ ನಿರ್ಧಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್

Suddi Udaya

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya

ಜೇನು ಕುಟುಂಬಕ್ಕಾಗಿ ಕಾಡಿಗೆ ತೆರಳಿದ್ದ ಅಣ್ಣ ಸಂತೋಷ್‌ಗೆ ಕಚ್ಚಿದ ಹಾವು: ಬಾಯಿಯಿಂದ ವಿಷ ಹೀರಿ ಅಣ್ಣನ ಜೀವ ಉಳಿಸಿದ ತಮ್ಮ ಗಣೇಶ್

Suddi Udaya

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!