25.5 C
ಪುತ್ತೂರು, ಬೆಳ್ತಂಗಡಿ
June 8, 2026
ರಾಜ್ಯ ಸುದ್ದಿ

5ನೇ ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ‌‌‌‌‌‌ಹೈಕೋರ್ಟ್ ನ ವಿಭಾಗೀಯಪೀಠ ಅನುಮತಿ

  • ಪಠ್ಯಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳವಂತಿಲ್ಲ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟಿಸುವಂತಿಲ್ಲ ಕೋರ್ಟು ಸೂಚನೆ

ಬೆಂಗಳೂರು: 5-8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ನ ವಿಭಾಗೀಯಪೀಠ ಅನುಮತಿ ನೀಡಿದೆ. 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.
10 ದಿನಗಳ ಬಳಿಕ ಅಂದರೆ ಮಾ.27 ರಿಂದ ಪರೀಕ್ಷೆ ನಡೆಸಲು ಹೈಕೋರ್ಟ್ ಸೂಚನೆ ನೀಡಿದ್ದು, ಪಠ್ಯಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳವಂತಿಲ್ಲ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟಿಸುವಂತಿಲ್ಲ. ಶಾಲೆಗೆ ಮಾತ್ರವೇ ಕಳಿಸಬೇಕು ಎಂದು ಹೈಕೋರ್ಟ್‌ ಸೂಚನೆ ನೀಡಿದೆ.

5-8 ನೇ ತರಗತಿ ಪರೀಕ್ಷೆ ನಡೆಸಲು ಶಿಕ್ಷಣ ಕಾಯ್ದೆಯಡಿ ನಿರ್ಬಂಧವಿಲ್ಲ ಆದ್ದರಿಂದ ಪರೀಕ್ಷೆ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠ ರದ್ದುಗೊಳಿಸಿದ್ದು ಪರೀಕ್ಷೆ ನಡೆಸಬಹುದೆಂದು ಆದೇಶ ನೀಡಿದೆ.

Related posts

ಇಂದು ಮಧ್ಯಾಹ್ನ 12ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ

Suddi Udaya

ಮಚ್ಚಿನ: ಅನುಮತಿ ಇಲ್ಲದೆ ಮರ ಕಡಿದು ಮೂರು ವಿದ್ಯುತ್ ಕಂಬಕ್ಕೆ ಹಾನಿ; ಮೆಸ್ಕಾಂ ಸಹಾಯವಾಣಿಗೆ ದೂರು ನೀಡಿದ್ದಕ್ಕೆ ದಂಪತಿಗಳಿಗೆ ಹಲ್ಲೆ

Suddi Udaya

ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

Suddi Udaya

ಕಲಬುರಗಿ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

Suddi Udaya
error: Content is protected !!