30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕರಾಡ ಬ್ರಾಹ್ಮಣ ಸಮಾಜದಿಂದ ಸಂಸ್ಕರಣೆ ಹಾಗೂ ನುಡಿನಮನ ಕಾರ್ಯಕ್ರಮ

ಬೆಳ್ತಂಗಡಿ:ಕೀರ್ತಿಶೇಷ ಬಲಿಪ ನಾರಾಯಣ ಭಾಗವತರು ಹಾಗೂ ಕೀರ್ತಿಶೇಷ ವಿಜಯ‌ರಾಘವ ಪಡ್ವೆಟ್ನಾಯರ ಸಂಸ್ಮರಣೆ ಹಾಗೂ ನುಡಿನಮನ ಕಾರ್ಯಕ್ರಮವನ್ನು “ಸಮೃದ್ಧಿ” ಕರಾಡ ಭವನ ಸೋಮಂತಡ್ಕದಲ್ಲಿ ಕರಾಡ ಬ್ರಾಹ್ಮಣ‌ ಸಮಾಜ (ರಿ),ಬೆಳ್ತಂಗಡಿ ಇದರ ವತಿಯಿಂದ ಹಮ್ಮಿಕೊಳ್ಳಲಾಯಿತು. ಯಕ್ಷಗಾನದ ಧ್ರುವತಾರೆ ಕಂಚಿನ ಕಂಠ ಕಂಠದ ಬಲಿಪ ನಾರಾಯಣ ಭಾಗವತರು ಮತ್ತು ಉಜಿರೆಯ ‌ಧಣಿಗಳು,ಧಾರ್ಮಕ ಕ್ಷೇತ್ರದಲ್ಲಿ ಹಾಗೂ ಸಮಾಜ ಸೇವೆಯಲ್ಲಿ ಹೆಸರುವಾಸಿಯಾದಂತಹ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ವಿಜಯರಾಘವ ಪಡ್ವೆಟ್ನಾಯರನ್ನು ಸ್ಮರಿಸಿ ಅವರ ಸಾಧನೆಯ‌ ಬಗ್ಗೆ ನೆನೆದು ಶ್ರೀ ಭುಜಬಲಿ ಧರ್ಮಸ್ಥಳ ಮತ್ತು ಶ್ರೀ ದಿವಾಕರ ಆಚಾರ್ಯ ಗೇರುಕಟ್ಟೆ ನುಡಿನಮನವನ್ನು ಸಲ್ಲಿಸಿದರು.

ವಿಜಯ ರಾಘವ ಪಡ್ವೆಟ್ನಾಯರ ಪುತ್ರರಾದ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರು – ಬಲಿಪರು ಯಕ್ಷಗಾನಕ್ಕೆ ನೀಡಿದ ಕೊಡುಗೆ ಹಾಗು ವಿಜಯ ರಾಘವ ಪಡ್ವೆಟ್ನಾಯರ ಸೇವೆ‌ ,ಸಮಾಜಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಮನದಾಳದ ಮಾತುಗಳನ್ನು ವ್ಯಕ್ತಪಡಿಸಿದರು.
ಬಲಿಪರಂತಹ‌ ಮಹಾನ್ ಚೇತನ ಮತ್ತು ಪಡ್ವೆಟ್ನಾಯರಂತಹ‌ ಮಹನೀಯರು ಸಮಾಜದ ಅನರ್ಘ್ಯ ರತ್ನಗಳೆಂದು ಸಾಧನೆಯ‌ನ್ನು ಸ್ಮರಿಸಿ ಕೀರ್ತಿಶೇಷರಿಗೆ ಅಕ್ಷರಾಂಜಲಿಗಳನ್ನು ಕರಾಡ ಬ್ರಾಹ್ಮಣ ಸಮಾಜದ ಅಧ್ಯಕ್ಷರು ಡಾ.ಪ್ರದೀಪ ಆಟಿಕುಕ್ಕೆ ಇವರು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಕರಾಡ ಬಂಧು ಭಗಿನಿಯರು ಹಾಗೂ ವಿಜಯ ರಾಘವ ಪಡ್ವೆಟ್ನಾಯರ ಮತ್ತು ಬಲಿಪ ನಾರಾಯಣ ಭಾಗವತರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.ಮಮತಾ.ವಿ.ಭಟ್ ಸ್ವಾಗತಿಸಿ ಕಾವ್ಯಶ್ರೀ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು. ಕಾರ್ಯಕ್ರಮಾನಂತರ ಇಬ್ಬರು ಮಹಾನ್ ಚೇತನರ ಸವಿ ನೆನಪಿಗಾಗಿ ಯಕ್ಷ ಭಾರತಿ ಕನ್ಯಾಡಿ ಇವರ ಸಂಯೋಜನೆಯಲ್ಲಿ “ಶ್ರೀ ರಾಮ ಪರಂಧಾಮ” ಯಕ್ಷಗಾನ ತಾಳಮದ್ದಳೆ ನಡೆಯಿತು.

Related posts

ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥ ಧರ್ಮಸ್ಥಳಕ್ಕೆ ಪ್ರವೇಶ

Suddi Udaya

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆ: OSAAT ಸಂಸ್ಥೆಯಿಂದ ರೂ.1.25 ಕೋಟಿ ಅನುದಾನದಲ್ಲಿ ಶಾಲಾ ಕೊಠಡಿಗೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
error: Content is protected !!