ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕರಾಡ ಬ್ರಾಹ್ಮಣ ಸಮಾಜದಿಂದ ಸಂಸ್ಕರಣೆ ಹಾಗೂ ನುಡಿನಮನ ಕಾರ್ಯಕ್ರಮ

ಬೆಳ್ತಂಗಡಿ:ಕೀರ್ತಿಶೇಷ ಬಲಿಪ ನಾರಾಯಣ ಭಾಗವತರು ಹಾಗೂ ಕೀರ್ತಿಶೇಷ ವಿಜಯ‌ರಾಘವ ಪಡ್ವೆಟ್ನಾಯರ ಸಂಸ್ಮರಣೆ ಹಾಗೂ ನುಡಿನಮನ ಕಾರ್ಯಕ್ರಮವನ್ನು “ಸಮೃದ್ಧಿ” ಕರಾಡ ಭವನ ಸೋಮಂತಡ್ಕದಲ್ಲಿ ಕರಾಡ ಬ್ರಾಹ್ಮಣ‌ ಸಮಾಜ (ರಿ),ಬೆಳ್ತಂಗಡಿ ಇದರ ವತಿಯಿಂದ ಹಮ್ಮಿಕೊಳ್ಳಲಾಯಿತು. ಯಕ್ಷಗಾನದ ಧ್ರುವತಾರೆ ಕಂಚಿನ ಕಂಠ ಕಂಠದ ಬಲಿಪ ನಾರಾಯಣ ಭಾಗವತರು ಮತ್ತು ಉಜಿರೆಯ ‌ಧಣಿಗಳು,ಧಾರ್ಮಕ ಕ್ಷೇತ್ರದಲ್ಲಿ ಹಾಗೂ ಸಮಾಜ ಸೇವೆಯಲ್ಲಿ ಹೆಸರುವಾಸಿಯಾದಂತಹ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ವಿಜಯರಾಘವ ಪಡ್ವೆಟ್ನಾಯರನ್ನು ಸ್ಮರಿಸಿ ಅವರ ಸಾಧನೆಯ‌ ಬಗ್ಗೆ ನೆನೆದು ಶ್ರೀ ಭುಜಬಲಿ ಧರ್ಮಸ್ಥಳ ಮತ್ತು ಶ್ರೀ ದಿವಾಕರ ಆಚಾರ್ಯ ಗೇರುಕಟ್ಟೆ ನುಡಿನಮನವನ್ನು ಸಲ್ಲಿಸಿದರು.

ವಿಜಯ ರಾಘವ ಪಡ್ವೆಟ್ನಾಯರ ಪುತ್ರರಾದ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರು – ಬಲಿಪರು ಯಕ್ಷಗಾನಕ್ಕೆ ನೀಡಿದ ಕೊಡುಗೆ ಹಾಗು ವಿಜಯ ರಾಘವ ಪಡ್ವೆಟ್ನಾಯರ ಸೇವೆ‌ ,ಸಮಾಜಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಮನದಾಳದ ಮಾತುಗಳನ್ನು ವ್ಯಕ್ತಪಡಿಸಿದರು.
ಬಲಿಪರಂತಹ‌ ಮಹಾನ್ ಚೇತನ ಮತ್ತು ಪಡ್ವೆಟ್ನಾಯರಂತಹ‌ ಮಹನೀಯರು ಸಮಾಜದ ಅನರ್ಘ್ಯ ರತ್ನಗಳೆಂದು ಸಾಧನೆಯ‌ನ್ನು ಸ್ಮರಿಸಿ ಕೀರ್ತಿಶೇಷರಿಗೆ ಅಕ್ಷರಾಂಜಲಿಗಳನ್ನು ಕರಾಡ ಬ್ರಾಹ್ಮಣ ಸಮಾಜದ ಅಧ್ಯಕ್ಷರು ಡಾ.ಪ್ರದೀಪ ಆಟಿಕುಕ್ಕೆ ಇವರು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಕರಾಡ ಬಂಧು ಭಗಿನಿಯರು ಹಾಗೂ ವಿಜಯ ರಾಘವ ಪಡ್ವೆಟ್ನಾಯರ ಮತ್ತು ಬಲಿಪ ನಾರಾಯಣ ಭಾಗವತರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.ಮಮತಾ.ವಿ.ಭಟ್ ಸ್ವಾಗತಿಸಿ ಕಾವ್ಯಶ್ರೀ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು. ಕಾರ್ಯಕ್ರಮಾನಂತರ ಇಬ್ಬರು ಮಹಾನ್ ಚೇತನರ ಸವಿ ನೆನಪಿಗಾಗಿ ಯಕ್ಷ ಭಾರತಿ ಕನ್ಯಾಡಿ ಇವರ ಸಂಯೋಜನೆಯಲ್ಲಿ “ಶ್ರೀ ರಾಮ ಪರಂಧಾಮ” ಯಕ್ಷಗಾನ ತಾಳಮದ್ದಳೆ ನಡೆಯಿತು.

Related posts

ಮಾಜಿ‌ ಸಚಿವ ಯು.ಟಿ ಖಾದರ್ ಕಾಜೂರು ದರ್ಗಾಶರೀಫ್ ಗೆ ಭೇಟಿ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕಕ್ಕೆ ಅತ್ಯುತ್ತಮ ‘ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್-2024’ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈಯವರಿಗೆ ಪ್ರಶಸ್ತಿ ಹಸ್ತಾಂತರ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ದೀಪೋತ್ಸವ
ಸಾಮೂಹಿಕ ಗೋಪೂಜೆ – ಗೋ ನಂದಾರತಿ ಕಾರ್ಯಕ್ರಮ

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆ ವಿಶೇಷ ಗ್ರಾಮ ಸಭೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಮೇಘಾಲಯ ರಾಜ್ಯದ ಸಹಕಾರ ಇಲಾಖೆಯ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya
error: Content is protected !!