25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕರಾಡ ಬ್ರಾಹ್ಮಣ ಸಮಾಜದಿಂದ ಸಂಸ್ಕರಣೆ ಹಾಗೂ ನುಡಿನಮನ ಕಾರ್ಯಕ್ರಮ

ಬೆಳ್ತಂಗಡಿ:ಕೀರ್ತಿಶೇಷ ಬಲಿಪ ನಾರಾಯಣ ಭಾಗವತರು ಹಾಗೂ ಕೀರ್ತಿಶೇಷ ವಿಜಯ‌ರಾಘವ ಪಡ್ವೆಟ್ನಾಯರ ಸಂಸ್ಮರಣೆ ಹಾಗೂ ನುಡಿನಮನ ಕಾರ್ಯಕ್ರಮವನ್ನು “ಸಮೃದ್ಧಿ” ಕರಾಡ ಭವನ ಸೋಮಂತಡ್ಕದಲ್ಲಿ ಕರಾಡ ಬ್ರಾಹ್ಮಣ‌ ಸಮಾಜ (ರಿ),ಬೆಳ್ತಂಗಡಿ ಇದರ ವತಿಯಿಂದ ಹಮ್ಮಿಕೊಳ್ಳಲಾಯಿತು. ಯಕ್ಷಗಾನದ ಧ್ರುವತಾರೆ ಕಂಚಿನ ಕಂಠ ಕಂಠದ ಬಲಿಪ ನಾರಾಯಣ ಭಾಗವತರು ಮತ್ತು ಉಜಿರೆಯ ‌ಧಣಿಗಳು,ಧಾರ್ಮಕ ಕ್ಷೇತ್ರದಲ್ಲಿ ಹಾಗೂ ಸಮಾಜ ಸೇವೆಯಲ್ಲಿ ಹೆಸರುವಾಸಿಯಾದಂತಹ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ವಿಜಯರಾಘವ ಪಡ್ವೆಟ್ನಾಯರನ್ನು ಸ್ಮರಿಸಿ ಅವರ ಸಾಧನೆಯ‌ ಬಗ್ಗೆ ನೆನೆದು ಶ್ರೀ ಭುಜಬಲಿ ಧರ್ಮಸ್ಥಳ ಮತ್ತು ಶ್ರೀ ದಿವಾಕರ ಆಚಾರ್ಯ ಗೇರುಕಟ್ಟೆ ನುಡಿನಮನವನ್ನು ಸಲ್ಲಿಸಿದರು.

ವಿಜಯ ರಾಘವ ಪಡ್ವೆಟ್ನಾಯರ ಪುತ್ರರಾದ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರು – ಬಲಿಪರು ಯಕ್ಷಗಾನಕ್ಕೆ ನೀಡಿದ ಕೊಡುಗೆ ಹಾಗು ವಿಜಯ ರಾಘವ ಪಡ್ವೆಟ್ನಾಯರ ಸೇವೆ‌ ,ಸಮಾಜಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಮನದಾಳದ ಮಾತುಗಳನ್ನು ವ್ಯಕ್ತಪಡಿಸಿದರು.
ಬಲಿಪರಂತಹ‌ ಮಹಾನ್ ಚೇತನ ಮತ್ತು ಪಡ್ವೆಟ್ನಾಯರಂತಹ‌ ಮಹನೀಯರು ಸಮಾಜದ ಅನರ್ಘ್ಯ ರತ್ನಗಳೆಂದು ಸಾಧನೆಯ‌ನ್ನು ಸ್ಮರಿಸಿ ಕೀರ್ತಿಶೇಷರಿಗೆ ಅಕ್ಷರಾಂಜಲಿಗಳನ್ನು ಕರಾಡ ಬ್ರಾಹ್ಮಣ ಸಮಾಜದ ಅಧ್ಯಕ್ಷರು ಡಾ.ಪ್ರದೀಪ ಆಟಿಕುಕ್ಕೆ ಇವರು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಕರಾಡ ಬಂಧು ಭಗಿನಿಯರು ಹಾಗೂ ವಿಜಯ ರಾಘವ ಪಡ್ವೆಟ್ನಾಯರ ಮತ್ತು ಬಲಿಪ ನಾರಾಯಣ ಭಾಗವತರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.ಮಮತಾ.ವಿ.ಭಟ್ ಸ್ವಾಗತಿಸಿ ಕಾವ್ಯಶ್ರೀ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು. ಕಾರ್ಯಕ್ರಮಾನಂತರ ಇಬ್ಬರು ಮಹಾನ್ ಚೇತನರ ಸವಿ ನೆನಪಿಗಾಗಿ ಯಕ್ಷ ಭಾರತಿ ಕನ್ಯಾಡಿ ಇವರ ಸಂಯೋಜನೆಯಲ್ಲಿ “ಶ್ರೀ ರಾಮ ಪರಂಧಾಮ” ಯಕ್ಷಗಾನ ತಾಳಮದ್ದಳೆ ನಡೆಯಿತು.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪತ್ತನಾಜೆ: ಉತ್ಸವಗಳ ಸಮಾಪನ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವ: ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿಂಜೆ ರವರು ಸೌತಡ್ಕ ದೇವಸ್ಥಾನಕ್ಕೆ ಭೇಟಿ, ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್

Suddi Udaya

ಮಚ್ಚಿನ: ಪ.ಜಾತಿ, ಪ. ಪಂಗಡ ಮತ್ತು ವಿಶೇಷ ಚೇತನರ ಫಲಾನುಭವಿಗಳಿಗೆ ಸಿಂಟೆಕ್ಸ್ ಮತ್ತು ವೀಲ್ ಚೇರ್ ವಿತರಣೆ

Suddi Udaya

ತೋಡಿನಂತಿರುವ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ : ಭಯಾನಕ ಗುಂಡಿಗಳಿಗೆ ತೇಪೆ ಕಾರ್ಯ

Suddi Udaya
error: Content is protected !!