32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕರಾಡ ಬ್ರಾಹ್ಮಣ ಸಮಾಜದಿಂದ ಸಂಸ್ಕರಣೆ ಹಾಗೂ ನುಡಿನಮನ ಕಾರ್ಯಕ್ರಮ

ಬೆಳ್ತಂಗಡಿ:ಕೀರ್ತಿಶೇಷ ಬಲಿಪ ನಾರಾಯಣ ಭಾಗವತರು ಹಾಗೂ ಕೀರ್ತಿಶೇಷ ವಿಜಯ‌ರಾಘವ ಪಡ್ವೆಟ್ನಾಯರ ಸಂಸ್ಮರಣೆ ಹಾಗೂ ನುಡಿನಮನ ಕಾರ್ಯಕ್ರಮವನ್ನು “ಸಮೃದ್ಧಿ” ಕರಾಡ ಭವನ ಸೋಮಂತಡ್ಕದಲ್ಲಿ ಕರಾಡ ಬ್ರಾಹ್ಮಣ‌ ಸಮಾಜ (ರಿ),ಬೆಳ್ತಂಗಡಿ ಇದರ ವತಿಯಿಂದ ಹಮ್ಮಿಕೊಳ್ಳಲಾಯಿತು. ಯಕ್ಷಗಾನದ ಧ್ರುವತಾರೆ ಕಂಚಿನ ಕಂಠ ಕಂಠದ ಬಲಿಪ ನಾರಾಯಣ ಭಾಗವತರು ಮತ್ತು ಉಜಿರೆಯ ‌ಧಣಿಗಳು,ಧಾರ್ಮಕ ಕ್ಷೇತ್ರದಲ್ಲಿ ಹಾಗೂ ಸಮಾಜ ಸೇವೆಯಲ್ಲಿ ಹೆಸರುವಾಸಿಯಾದಂತಹ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ವಿಜಯರಾಘವ ಪಡ್ವೆಟ್ನಾಯರನ್ನು ಸ್ಮರಿಸಿ ಅವರ ಸಾಧನೆಯ‌ ಬಗ್ಗೆ ನೆನೆದು ಶ್ರೀ ಭುಜಬಲಿ ಧರ್ಮಸ್ಥಳ ಮತ್ತು ಶ್ರೀ ದಿವಾಕರ ಆಚಾರ್ಯ ಗೇರುಕಟ್ಟೆ ನುಡಿನಮನವನ್ನು ಸಲ್ಲಿಸಿದರು.

ವಿಜಯ ರಾಘವ ಪಡ್ವೆಟ್ನಾಯರ ಪುತ್ರರಾದ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರು – ಬಲಿಪರು ಯಕ್ಷಗಾನಕ್ಕೆ ನೀಡಿದ ಕೊಡುಗೆ ಹಾಗು ವಿಜಯ ರಾಘವ ಪಡ್ವೆಟ್ನಾಯರ ಸೇವೆ‌ ,ಸಮಾಜಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಮನದಾಳದ ಮಾತುಗಳನ್ನು ವ್ಯಕ್ತಪಡಿಸಿದರು.
ಬಲಿಪರಂತಹ‌ ಮಹಾನ್ ಚೇತನ ಮತ್ತು ಪಡ್ವೆಟ್ನಾಯರಂತಹ‌ ಮಹನೀಯರು ಸಮಾಜದ ಅನರ್ಘ್ಯ ರತ್ನಗಳೆಂದು ಸಾಧನೆಯ‌ನ್ನು ಸ್ಮರಿಸಿ ಕೀರ್ತಿಶೇಷರಿಗೆ ಅಕ್ಷರಾಂಜಲಿಗಳನ್ನು ಕರಾಡ ಬ್ರಾಹ್ಮಣ ಸಮಾಜದ ಅಧ್ಯಕ್ಷರು ಡಾ.ಪ್ರದೀಪ ಆಟಿಕುಕ್ಕೆ ಇವರು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಕರಾಡ ಬಂಧು ಭಗಿನಿಯರು ಹಾಗೂ ವಿಜಯ ರಾಘವ ಪಡ್ವೆಟ್ನಾಯರ ಮತ್ತು ಬಲಿಪ ನಾರಾಯಣ ಭಾಗವತರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.ಮಮತಾ.ವಿ.ಭಟ್ ಸ್ವಾಗತಿಸಿ ಕಾವ್ಯಶ್ರೀ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು. ಕಾರ್ಯಕ್ರಮಾನಂತರ ಇಬ್ಬರು ಮಹಾನ್ ಚೇತನರ ಸವಿ ನೆನಪಿಗಾಗಿ ಯಕ್ಷ ಭಾರತಿ ಕನ್ಯಾಡಿ ಇವರ ಸಂಯೋಜನೆಯಲ್ಲಿ “ಶ್ರೀ ರಾಮ ಪರಂಧಾಮ” ಯಕ್ಷಗಾನ ತಾಳಮದ್ದಳೆ ನಡೆಯಿತು.

Related posts

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

Suddi Udaya

ಕೊಕ್ಕಡ : ಮುಂಡೂರುಪಳಿಕೆ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬಹರೈನ್, ದುಬೈಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತಿಯಲ್ಲಿ ಬ್ರಹ್ಮಾನಂದ ಶ್ರೀಗಳಿಂದ ಆಶೀರ್ವಚನ

Suddi Udaya

ಉಪನಯನದಲ್ಲಿ ಗಾನವೈಭವ

Suddi Udaya

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

Suddi Udaya

ನ.22: ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟದಿಂದ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಯಕ್ಷಗಾನ ಬಯಲಾಟ

Suddi Udaya
error: Content is protected !!