25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕರಾಡ ಬ್ರಾಹ್ಮಣ ಸಮಾಜದಿಂದ ಸಂಸ್ಕರಣೆ ಹಾಗೂ ನುಡಿನಮನ ಕಾರ್ಯಕ್ರಮ

ಬೆಳ್ತಂಗಡಿ:ಕೀರ್ತಿಶೇಷ ಬಲಿಪ ನಾರಾಯಣ ಭಾಗವತರು ಹಾಗೂ ಕೀರ್ತಿಶೇಷ ವಿಜಯ‌ರಾಘವ ಪಡ್ವೆಟ್ನಾಯರ ಸಂಸ್ಮರಣೆ ಹಾಗೂ ನುಡಿನಮನ ಕಾರ್ಯಕ್ರಮವನ್ನು “ಸಮೃದ್ಧಿ” ಕರಾಡ ಭವನ ಸೋಮಂತಡ್ಕದಲ್ಲಿ ಕರಾಡ ಬ್ರಾಹ್ಮಣ‌ ಸಮಾಜ (ರಿ),ಬೆಳ್ತಂಗಡಿ ಇದರ ವತಿಯಿಂದ ಹಮ್ಮಿಕೊಳ್ಳಲಾಯಿತು. ಯಕ್ಷಗಾನದ ಧ್ರುವತಾರೆ ಕಂಚಿನ ಕಂಠ ಕಂಠದ ಬಲಿಪ ನಾರಾಯಣ ಭಾಗವತರು ಮತ್ತು ಉಜಿರೆಯ ‌ಧಣಿಗಳು,ಧಾರ್ಮಕ ಕ್ಷೇತ್ರದಲ್ಲಿ ಹಾಗೂ ಸಮಾಜ ಸೇವೆಯಲ್ಲಿ ಹೆಸರುವಾಸಿಯಾದಂತಹ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ವಿಜಯರಾಘವ ಪಡ್ವೆಟ್ನಾಯರನ್ನು ಸ್ಮರಿಸಿ ಅವರ ಸಾಧನೆಯ‌ ಬಗ್ಗೆ ನೆನೆದು ಶ್ರೀ ಭುಜಬಲಿ ಧರ್ಮಸ್ಥಳ ಮತ್ತು ಶ್ರೀ ದಿವಾಕರ ಆಚಾರ್ಯ ಗೇರುಕಟ್ಟೆ ನುಡಿನಮನವನ್ನು ಸಲ್ಲಿಸಿದರು.

ವಿಜಯ ರಾಘವ ಪಡ್ವೆಟ್ನಾಯರ ಪುತ್ರರಾದ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರು – ಬಲಿಪರು ಯಕ್ಷಗಾನಕ್ಕೆ ನೀಡಿದ ಕೊಡುಗೆ ಹಾಗು ವಿಜಯ ರಾಘವ ಪಡ್ವೆಟ್ನಾಯರ ಸೇವೆ‌ ,ಸಮಾಜಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಮನದಾಳದ ಮಾತುಗಳನ್ನು ವ್ಯಕ್ತಪಡಿಸಿದರು.
ಬಲಿಪರಂತಹ‌ ಮಹಾನ್ ಚೇತನ ಮತ್ತು ಪಡ್ವೆಟ್ನಾಯರಂತಹ‌ ಮಹನೀಯರು ಸಮಾಜದ ಅನರ್ಘ್ಯ ರತ್ನಗಳೆಂದು ಸಾಧನೆಯ‌ನ್ನು ಸ್ಮರಿಸಿ ಕೀರ್ತಿಶೇಷರಿಗೆ ಅಕ್ಷರಾಂಜಲಿಗಳನ್ನು ಕರಾಡ ಬ್ರಾಹ್ಮಣ ಸಮಾಜದ ಅಧ್ಯಕ್ಷರು ಡಾ.ಪ್ರದೀಪ ಆಟಿಕುಕ್ಕೆ ಇವರು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಕರಾಡ ಬಂಧು ಭಗಿನಿಯರು ಹಾಗೂ ವಿಜಯ ರಾಘವ ಪಡ್ವೆಟ್ನಾಯರ ಮತ್ತು ಬಲಿಪ ನಾರಾಯಣ ಭಾಗವತರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.ಮಮತಾ.ವಿ.ಭಟ್ ಸ್ವಾಗತಿಸಿ ಕಾವ್ಯಶ್ರೀ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು. ಕಾರ್ಯಕ್ರಮಾನಂತರ ಇಬ್ಬರು ಮಹಾನ್ ಚೇತನರ ಸವಿ ನೆನಪಿಗಾಗಿ ಯಕ್ಷ ಭಾರತಿ ಕನ್ಯಾಡಿ ಇವರ ಸಂಯೋಜನೆಯಲ್ಲಿ “ಶ್ರೀ ರಾಮ ಪರಂಧಾಮ” ಯಕ್ಷಗಾನ ತಾಳಮದ್ದಳೆ ನಡೆಯಿತು.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಚಿಕಿತ್ಸಾ ನೆರವು

Suddi Udaya

ಸುರತ್ಕಲ್ ಮುಕ್ಕದಲ್ಲಿ ಕಾರು ಡಿಕ್ಕಿ: ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಜೀವನ್ ಕುಮಾರ್ ಸಾವು

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ನವೀಕೃತಗೊಂಡ ಉಜಿರೆ ಹಳೇಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಸ್ತಾಂತರ

Suddi Udaya

ಉಜಿರೆ : ಅರ್ಜುನ ಪ್ರಶಸ್ತಿ ಪುರಸ್ಕೃತೆ ಪೂವಮ್ಮ ಅವರಿಂದ ಎಸ್.ಡಿ.ಎಂ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!