25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ರೈತ ರತ್ನ” ಗೌರವ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಭಾರತೀಯ ಭೂ ಸೇನೆಯಲ್ಲಿ 18 ವಷ೯ ಯೋಧರಾಗಿ ದೇಶ ರಕ್ಷಣೆ ಯ ಕಾಯ೯ಮಾಡಿ ನಿವೃತ್ತರಾಗಿರುವ ಗೋಪಾಲಕೃಷ್ಣ ಕಾಂಚೋಡು ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊಡಮಾಡುವ ಪ್ರತಿಷ್ಠಿತ
ಜೈ ಜವಾನ್ ಜೈ ಕಿಸಾನ್ “ರೈತ ರತ್ನ” ಪ್ರಶಸ್ತಿ ಗೆ ಆಯ್ಕೆ ಯಾಗಿದ್ದು, ಮಾ.15ರಂದು ಬೆಂಗಳೂರಿನ
ಟೌನ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ‌ ಪರಿಷತ್ ಸ್ಪೀಕರ್ ಬಸವರಾಜ ಹೊರಟ್ಟಿ ಪ್ರದಾನ ಮಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರುಗಳಾದ ಮುರುಗೇಶ್ ನಿರಾಣಿ, ಡಾ. ಸುಧಾಕರ್, ಬಿ.ಸಿ ಪಾಟೀಲ್ ಹಾಗೂ ತೋಮರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಏಕ್‌ ಭಾರತ್’ ಕಾಯ೯ಕ್ರಮದಲ್ಲಿ ಪ್ರತಿ ವರ್ಷದಂತೆ ಈ ವರ್ಷ ನೀಡಲಾಗುವ ಪ್ರತಿಷ್ಠಿತ ಪ್ರಶಸ್ತಿಗೆ ಕಾಂಚೋಡು ಅವರು ಪುರಸ್ಕೃತ ಗೊಂಡಿದ್ದಾರೆ.

ಅವರು ಭಾರತೀಯ ಭೂ ಸೇನೆಯಲ್ಲಿ ಜಮ್ಮು ಕಾಶ್ಮೀರ ಸೇರಿದಂತೆ ದೇಶದ ವಿವಿಧೆಡೆ ಸೇವೆ ಸಲ್ಲಿಸಿ ನಿವೃತ್ತರಾದವರು.‌

ಸೇನಾ ನಿವೃತ್ತಿಯ ನಂತರ ತನ್ನೂರಿಗೆ ಬಂದು ಬೆಳ್ತಂಗಡಿ ತಾಲೂಕು ಉಜಿರೆ ಯಲ್ಲಿ ನೆಲೆಸಿ, “ರವಿ ಟ್ರೇಡರ್ಸ್” ಎಂದ್ದಿಮೆ ಸ್ಥಾಪಿಸಿ ಹತ್ತಾರು ಯುವಕರಿಗೆ ಜೀವನೋಪಾಯದ ಹಾದಿಯನ್ನು ಸೃಷ್ಟಿಸುತ್ತಾ ಸೇನೆಗೆ ಸೇರಲು ಬಯಸುವ ಯುವಕರಿಗೆ ಉಚಿತ ಮಾಹಿತಿ ನೀಡುತ್ತಾ ಬರುತ್ತಿದ್ದಾರೆ.


ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾ, ಕೃಷಿ ಕ್ಷೇತ್ರ ದಲ್ಲಿ ವೈಜ್ಞಾನಿಕವಾಗಿ, ಉತ್ತಮ ಆದಾಯ ಪಡೆಯುವ ಆಧುನಿಕ ತಂತ್ರಜ್ಞಾನ ಗಳೊಂದಿಗೆ ಪ್ರಕೃತಿಗೆ ತೊಂದರೆ

ಯಾಗದಂತೆ (ಜಲ, ನೆಲ ಉಳಿಸಿ ) ಸಾವಯವ ಕೃಷಿಯನ್ನು ಮಾಡುತ್ತಾ, ಕಂಗು, ತೆಂಗು, ಬಾಳೆ ಕೃಷಿಗಳೊಂದಿಗೆ ಎಲ್ಹೋಟಿಕ್ (exotic) ಹಣ್ಣುಗಳನ್ನು ಬೆಳೆಯುತ್ತಾ, ಪ್ರಾಕೃತಿಕವಾಗಿ ಪ್ರಕೃತಿ ಸಹಜಕ್ರಿಯೆ, ಪರಾಗ ಸ್ಪರ್ಶಕ್ಕೆ ಪೂರಕ ಜೇನುಸಾಕಣೆ ಮಾಡುತ್ತಾ ಹತ್ತು ಹಲವು ಆಸಕ್ತ ಕೃಷಿಕರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಸರ್ಕಾರ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಿದೆ.

Related posts

ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಾತೃ ಪೂಜನ, ಮಾತೃ ವಂದನ ಮತ್ತು ಮಾತೃ ಭೋಜನ ವಿಶಿಷ್ಟ ಭಾವಪೂರ್ಣ ಕಾರ್ಯಕ್ರಮ

Suddi Udaya

ಕೊಡಗು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ವಿಧಾನ ಪರಿಷತ್ತಿನ ಶಾಸಕ ಪ್ರತಾಪ್ ಸಿಂಹ ನಾಯಕ್ ನೇಮಕ

Suddi Udaya

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!