23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಮಾರಾಟ: ಬೈಕ್ ಸಹಿತ ರೂ. 76 ಸಾವಿರ ಮೌಲ್ಯದ ಮದ್ಯ ವಶ

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಡಿಡುಪೆ-ಕಜಕ್ಕೆ ಹೋಗುವ ಡಾಮರು ಮಾರ್ಗದ ಎಡಬದಿಯಲ್ಲಿ ದ್ವಿ ಚಕ್ರ ವಾಹನದಲ್ಲಿ ಸತೀಶ್ ಗೌಡ ಬಲಾಯಿದಡ್ಡು, ಮಲವಂತಿಗೆ ಇವರು ಅಕ್ರಮವಾಗಿ ಒಟ್ಟು. 4 ಲೀಟರ್ ಮದ್ಯವನ್ನು ಮಾರಾಟದ ಉದ್ದೇಶಕ್ಕಾಗಿ ಹೊಂದಿರುವುದನ್ನು ಪತ್ತೆಹಚ್ಚಿದ ಅಬಕಾರಿ ಇಲಾಖೆ ಯ ಅಧಿಕಾರಿಗಳು, ಆರೋಪಿಯ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ವಾಹನ ಹಾಗೂ ಸೊತ್ತಿನ ಮೌಲ್ಯ ಸುಮಾರು ರೂ. 76,200 ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಅಬಕಾರಿ ಉಪ ನಿರೀಕ್ಷಕರಾದ ಸಯ್ಯದ್ ಶಬೀರ್ ಅಬಕಾರಿ ಕಾನ್ಸ್ ಟೇಬಲ್ ರವರಾದ ಭೋಜ ಕೆ, ವಿನೋಯ್ ಸಿ.ಜೆ ಮತ್ತು ವಾಹನ ಚಾಲಕರಾದ ನವೀನ್ ಕುಮಾರ್ ಪಿ. ಭಾಗವಹಿಸಿದ್ದರು. ಪ್ರಕರಣವನ್ನು ಸಯ್ಯದ್ ಶಬೀರ್ ಅಬಕಾರಿ ಉಪ ನಿರೀಕ್ಷಕರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Related posts

ಅಕ್ರಮ ಗೋಮಾಂಸ ಮಾರಾಟ ಮಾಡಲು ಅಂಗಡಿಯಲ್ಲಿ ದಾಸ್ತಾನು ಬೆಳ್ತಂಗಡಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳ ಬಂಧನ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಧರ್ಮಸ್ಥಳದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಖುಲಾಸೆ

Suddi Udaya

ಶಿಶಿಲ: ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ಪ್ರಕರಣ : ಓರ್ವನ ಬಂಧನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ : ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಣಕ್ಕೆ ಯತ್ನಿಸಿದ ಮುಸುಕುಧಾರಿಗಳು: ಚೂರಿಯಿಂದ ಇರಿದು ಹಲ್ಲೆ: ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

Suddi Udaya
error: Content is protected !!