July 23, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ
ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಮುಂಬರುವ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ, ಪೊಲೀಸ್ ಅಧೀಕ್ಷಕರಾದ ಡಾ || ವಿಕ್ರಮ್ ಅಮಟೆ ಯವರು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳೊಂದಿಗೆ *ನಾರಾವಿ,ಚಾರ್ಮಾಡಿ, ಕೊಕ್ಕಡ ಗಳಲ್ಲಿರುವ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ , ಪರಿಶೀಲಿಸಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಚುನಾವಣೆ ಕರ್ತವ್ಯ ಗಳ ಬಗ್ಗೆ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಿ
ಚೆಕ್ ಪೋಸ್ಟ್ ಗಳಲ್ಲಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದರು.


ನಕ್ಸಲ್ ಪೀಡಿತ ಹಾಗೂ ಸೂಕ್ಷ್ಮ ಮತಗಟ್ಟೆ ಗಳಾದ ನಾವೂರು, ತೋಟತಾಡಿ, ಉಜಿರೆ ಮತಗಟ್ಟೆ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಚುನಾವಣೆ ಸೂಕ್ಷ್ಮ ಪ್ರದೇಶಗಳಾದ ನಾವೂರು ಹಾಗೂ ಚಾರ್ಮಾಡಿ ಗ್ರಾಮ ಗಳಿಗೆ ಭೇಟಿ ನೀಡಿ ಸಿಟಿಜನ್ ಕಮಿಟಿ ಸಭೆ ನಡೆಸಿ, ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ಕಾರ್ಯ ಹಾಗೂ ಸ್ಥಳೀಯ ರೌಡಿ ಶೀಟರ್ ಗಳಿಗೆ ಎಚ್ಚರಿಕೆಯನ್ನು ನೀಡಿದರು.

‌ ಮುಂಬರುವ ಚುನಾವಣೆ ಕರ್ತವ್ಯಕ್ಕೆ ಜಿಲ್ಲೆಗೆ ಆಗಮಿಸುವ ಅರೆ ಸೇನಾಪಡೆ ಗಳಿಗೆ ವಾಸ್ತವ್ಯ ಕಲ್ಪಿಸಲು ಗುರುತಿಸಿರುವ ಶಾಲೆ , ಕಾಲೇಜು ಗಳಿಗೆ ಭೇಟಿ ನೀಡಿ ಸುರಕ್ಷತೆ ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿರುತ್ತಾರೆ.
ಬೆಳ್ತಂಗಡಿ ಪೊಲೀಸ್ ಸರ್ಕಲ್ ವ್ಯಾಪ್ತಿಗೆ ಸಂಬಂಧಪಟ್ಟ ಪ್ರಕರಣಗಳಲ್ಲಿ ಸಂತ್ರಸ್ಥರ ಜೊತೆ ಸಂತ್ರಸ್ಥರ ಸಭೆ ನಡೆಸಿ, ಪ್ರಕರಣಗಳ ಪ್ರಸ್ತುತ ಹಂತದ ಬಗ್ಗೆ ಮಾಹಿತಿ ನೀಡಿ, ಸಮಸ್ಯೆಗಳ ಬಗ್ಗೆ ವಿಚಾರಿಸಿ,ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು.

ಬೆಳ್ತಂಗಡಿ ಯಲ್ಲಿ ಪೊಲೀಸ್ ಅಧಿಕಾರಿ ಹಾಗೂ* ಸಿಬ್ಬಂದಿಗಳ ಬ್ರಿಫಿಂಗ್ ಸಭೆ ನಡೆಸಿ, ಸಿಬ್ಬಂದಿಗಳ ಕುಂದುಕೊರತೆಗಳನ್ನು ವಿಚಾರಿಸಿ, ಮುಂಬರುವ ಚುನಾವಣೆ ಗೆ ಸಂಬಂದಿಸಿದ ಕಾನೂನುಗಳ ಬಗ್ಗೆ ಮಾಹಿತಿ ನೀಡಿ,ಪರಿಣಾಮಕಾ
ರಿಯಾಗಿ ಕರ್ತವ್ಯ ನಿರ್ವಹಿಸುವ ಬಗ್ಗೆ ಮಾರ್ಗದರ್ಶನ ನೀಡಿದರು.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಅವಿರೋಧ ಆಯ್ಕೆ

Suddi Udaya

ಫೆ.10: ಪಡಂಗಡಿ ಮಲ್ಲಿಪ್ಪಾಡಿ ಶ್ರೀಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿ ಪೂಜೆ

Suddi Udaya

ಸವಣಾಲು: ಗುತ್ತಿನಬೈಲು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

Suddi Udaya
error: Content is protected !!