25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ
ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಮುಂಬರುವ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ, ಪೊಲೀಸ್ ಅಧೀಕ್ಷಕರಾದ ಡಾ || ವಿಕ್ರಮ್ ಅಮಟೆ ಯವರು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳೊಂದಿಗೆ *ನಾರಾವಿ,ಚಾರ್ಮಾಡಿ, ಕೊಕ್ಕಡ ಗಳಲ್ಲಿರುವ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ , ಪರಿಶೀಲಿಸಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಚುನಾವಣೆ ಕರ್ತವ್ಯ ಗಳ ಬಗ್ಗೆ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಿ
ಚೆಕ್ ಪೋಸ್ಟ್ ಗಳಲ್ಲಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದರು.


ನಕ್ಸಲ್ ಪೀಡಿತ ಹಾಗೂ ಸೂಕ್ಷ್ಮ ಮತಗಟ್ಟೆ ಗಳಾದ ನಾವೂರು, ತೋಟತಾಡಿ, ಉಜಿರೆ ಮತಗಟ್ಟೆ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಚುನಾವಣೆ ಸೂಕ್ಷ್ಮ ಪ್ರದೇಶಗಳಾದ ನಾವೂರು ಹಾಗೂ ಚಾರ್ಮಾಡಿ ಗ್ರಾಮ ಗಳಿಗೆ ಭೇಟಿ ನೀಡಿ ಸಿಟಿಜನ್ ಕಮಿಟಿ ಸಭೆ ನಡೆಸಿ, ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ಕಾರ್ಯ ಹಾಗೂ ಸ್ಥಳೀಯ ರೌಡಿ ಶೀಟರ್ ಗಳಿಗೆ ಎಚ್ಚರಿಕೆಯನ್ನು ನೀಡಿದರು.

‌ ಮುಂಬರುವ ಚುನಾವಣೆ ಕರ್ತವ್ಯಕ್ಕೆ ಜಿಲ್ಲೆಗೆ ಆಗಮಿಸುವ ಅರೆ ಸೇನಾಪಡೆ ಗಳಿಗೆ ವಾಸ್ತವ್ಯ ಕಲ್ಪಿಸಲು ಗುರುತಿಸಿರುವ ಶಾಲೆ , ಕಾಲೇಜು ಗಳಿಗೆ ಭೇಟಿ ನೀಡಿ ಸುರಕ್ಷತೆ ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿರುತ್ತಾರೆ.
ಬೆಳ್ತಂಗಡಿ ಪೊಲೀಸ್ ಸರ್ಕಲ್ ವ್ಯಾಪ್ತಿಗೆ ಸಂಬಂಧಪಟ್ಟ ಪ್ರಕರಣಗಳಲ್ಲಿ ಸಂತ್ರಸ್ಥರ ಜೊತೆ ಸಂತ್ರಸ್ಥರ ಸಭೆ ನಡೆಸಿ, ಪ್ರಕರಣಗಳ ಪ್ರಸ್ತುತ ಹಂತದ ಬಗ್ಗೆ ಮಾಹಿತಿ ನೀಡಿ, ಸಮಸ್ಯೆಗಳ ಬಗ್ಗೆ ವಿಚಾರಿಸಿ,ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು.

ಬೆಳ್ತಂಗಡಿ ಯಲ್ಲಿ ಪೊಲೀಸ್ ಅಧಿಕಾರಿ ಹಾಗೂ* ಸಿಬ್ಬಂದಿಗಳ ಬ್ರಿಫಿಂಗ್ ಸಭೆ ನಡೆಸಿ, ಸಿಬ್ಬಂದಿಗಳ ಕುಂದುಕೊರತೆಗಳನ್ನು ವಿಚಾರಿಸಿ, ಮುಂಬರುವ ಚುನಾವಣೆ ಗೆ ಸಂಬಂದಿಸಿದ ಕಾನೂನುಗಳ ಬಗ್ಗೆ ಮಾಹಿತಿ ನೀಡಿ,ಪರಿಣಾಮಕಾ
ರಿಯಾಗಿ ಕರ್ತವ್ಯ ನಿರ್ವಹಿಸುವ ಬಗ್ಗೆ ಮಾರ್ಗದರ್ಶನ ನೀಡಿದರು.

Related posts

ಉಮಾಮಹೇಶ್ವರ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಕಿರಿಯಾಡಿ ವೃತ್ತ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ಕಳೆಂಜ ಅರಣ್ಯ ಇಲಾಖೆ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆ ನಿರ್ಮಾಣ: ಅಕ್ರಮ ಪ್ರವೇಶ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ: 11 ಜನರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

Suddi Udaya

ನೆರಿಯ: ಗಂಡಿಬಾಗಿಲು ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ

Suddi Udaya

ಬದ್ಯಾರು ಸಮೀಪ ಆಟೋ ಪಲ್ಟಿ, ರಿಕ್ಷಾದಲ್ಲಿದ್ದ ಯುವಕ ಧಾರುಣ ಸಾವು

Suddi Udaya
error: Content is protected !!