September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಸಾಧಕರು

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ನೂತನವಾಗಿ ಆರಂಭಗೊಂಡ ಸುದ್ದಿ ಉದಯ ವಾರ ಪತ್ರಿಕೆಯನ್ನು ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಮಾ. 21ರಂದು ಬಿಡುಗಡೆಗೊಳಿಸಿದರು.

ನಂತರ ಆಶೀರ್ವಾದಿಸಿದ ಸ್ವಾಮೀಜಿಯವರು ಸುದ್ದಿ “ಉದಯ ಪತ್ರಿಕೆ” ಚೆನ್ನಾಗಿ ಮೂಡಿ ಬಂದಿದೆ. ಪತ್ರಿಕೆಗೆ ತಾಲೂಕಿನ ಓದುಗರ ಪೂರ್ಣಬೆಂಬಲ ಹಾಗೂ ಪ್ರೋತ್ಸಾಹ ದೊರೆಯುತ್ತದೆ. ಪತ್ರಿಕೆಯಲ್ಲಿ ಉತ್ತಮ ವಿಚಾರಗಳು ಪ್ರಕಟಗೊಳ್ಳಬೇಕು. ಈ ಪತ್ರಿಕೆ ಉನ್ನತಿಯನ್ನು ಪಡೆಯಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪತ್ರಿಕೆಯ ಪ್ರಧಾನ ಸಂಪಾದಕ ಬಿ.ಎಸ್ ಕುಲಾಲ್, ಮಾಲಕ ತುಕರಾಮ್ ಬಿ., ಸಹ ಸಂಪಾದಕ ಸಂತೋಷ್ ಪಿ. ಕೋಟ್ಯಾನ್, ಕಚೇರಿ ವ್ಯವಸ್ಥಾಪಕ ತಿಮ್ಮಪ್ಪ ಗೌಡ, ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಆನಂದ ಹೊಸಪಟ್ಣ, ಯುವ ಸಾಹಿತಿ ಚಂದ್ರಹಾಸ ಬಳಂಜ, ಕಚೇರಿ ಸಿಬ್ಬಂದಿ ಭವನೀಸ್ ಉಪಸ್ಥಿತರಿದ್ದರು.

Related posts

ರೆಖ್ಯದಲ್ಲಿ ಕಾಡಾನೆ ದಾಳಿ: ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ ಬಲಿ

Suddi Udaya

ಬೆಂಗಳೂರಿನಲ್ಲಿರುವ ಯೂಟ್ಯೂಬರ್ ಸಮೀರ್.ಎಂ.ಡಿ ರವರ ಬಾಡಿಗೆ ಮನೆಗೆ ಬೆಳ್ತಂಗಡಿ ಪೊಲೀಸರ ದಾಳಿ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ಪರಿಸರ ದಿನಾಚರಣೆ- ಗೋ ಗ್ರೀನ್ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ

Suddi Udaya

ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಕೊಕ್ಕಡ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರದಲ್ಲಿ ಸಾನಿಧ್ಯ ದೈವಗಳ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವ

Suddi Udaya
error: Content is protected !!