23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಪ್ರಮುಖ ಸುದ್ದಿಸಾಧಕರು

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ನೂತನವಾಗಿ ಆರಂಭಗೊಂಡ ಸುದ್ದಿ ಉದಯ ವಾರ ಪತ್ರಿಕೆಯನ್ನು ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಮಾ. 21ರಂದು ಬಿಡುಗಡೆಗೊಳಿಸಿದರು.

ನಂತರ ಆಶೀರ್ವಾದಿಸಿದ ಸ್ವಾಮೀಜಿಯವರು ಸುದ್ದಿ “ಉದಯ ಪತ್ರಿಕೆ” ಚೆನ್ನಾಗಿ ಮೂಡಿ ಬಂದಿದೆ. ಪತ್ರಿಕೆಗೆ ತಾಲೂಕಿನ ಓದುಗರ ಪೂರ್ಣಬೆಂಬಲ ಹಾಗೂ ಪ್ರೋತ್ಸಾಹ ದೊರೆಯುತ್ತದೆ. ಪತ್ರಿಕೆಯಲ್ಲಿ ಉತ್ತಮ ವಿಚಾರಗಳು ಪ್ರಕಟಗೊಳ್ಳಬೇಕು. ಈ ಪತ್ರಿಕೆ ಉನ್ನತಿಯನ್ನು ಪಡೆಯಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪತ್ರಿಕೆಯ ಪ್ರಧಾನ ಸಂಪಾದಕ ಬಿ.ಎಸ್ ಕುಲಾಲ್, ಮಾಲಕ ತುಕರಾಮ್ ಬಿ., ಸಹ ಸಂಪಾದಕ ಸಂತೋಷ್ ಪಿ. ಕೋಟ್ಯಾನ್, ಕಚೇರಿ ವ್ಯವಸ್ಥಾಪಕ ತಿಮ್ಮಪ್ಪ ಗೌಡ, ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಆನಂದ ಹೊಸಪಟ್ಣ, ಯುವ ಸಾಹಿತಿ ಚಂದ್ರಹಾಸ ಬಳಂಜ, ಕಚೇರಿ ಸಿಬ್ಬಂದಿ ಭವನೀಸ್ ಉಪಸ್ಥಿತರಿದ್ದರು.

Related posts

ಶಿಶಿಲ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂದ ದೂರು ಅರ್ಜಿಯ ಮೇರೆಗೆ ಸ್ಥಳ ಪರಿಶೀಲಿಸಿದ ಶಾಸಕರು

Suddi Udaya

ಅಳದಂಗಡಿ ವಲಯ ಬಡಗಕಾರಂದೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ನಿಡ್ಲೆ ಗ್ರಾಮ ಸೇವಾ ಸಮಿತಿ ನೇತೃತ್ವದಲ್ಲಿ ‘ಅಯೋಧ್ಯಾ ದೀಪ’ ಯಕ್ಷಗಾನ ಬಯಲಾಟ

Suddi Udaya

ಧರ್ಮಸ್ಥಳದಲ್ಲಿ ಬಿವೋಕ್‌ ವಿದ್ಯಾರ್ಥಿಗಳಿಗೆ ಸ್ಟಾಪ್‌ ಮೋಶನ್‌ ಅನಿಮೇಶನ್‌ ಕಾರ್ಯಾಗಾರ

Suddi Udaya

ಕಣಿಯೂರು ಗ್ರಾ. ಪಂ. ಸಭಾಭವನ, ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ ಹಾಗೂ ಪದ್ಮುಂಜ ಅಂಗನವಾಡಿ ಕೇಂದ್ರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರಾದ ರಂಜನ್ ಜಿ. ಗೌಡ ಮತ್ತು ಅಭಿನಂದನ್ ಹರೀಶ್ ಕುಮಾರ್

Suddi Udaya
error: Content is protected !!